ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣ ನಾಲ್ವರು ಅಪರಾಧಿಗಳನ್ನು ಇಂದು ದೆಹಲಿಯ ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲಾಗಿದೆ. ಬರೋಬ್ಬರಿ 7 ವರ್ಷಗಳ ಸುದೀರ್ಘ ನ್ಯಾಯಾಂಗ ವಿಚಾರಣೆಯ ಬಳಿಕ ಕೊನೆಗೂ ಅತ್ಯಾಚಾರಿಗಳ ಅಂತ್ಯದ ಮೂಲಕ ಪ್ರಕರಣ ತೆರೆ ಕಂಡಿದೆ.
ಅತ್ಯಾಚಾರಿಗಳಿಗೆ ಗಲ್ಲು ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ನ್ಯಾಯ ಗೆದ್ದಿದೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುವುದು ಅತ್ಯಂತ ಮಹತ್ವದ್ದಾಗಿದೆ. ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ. ಒಟ್ಟಾಗಿ, ನಾವು ಮಹಿಳಾ ಸಬಲೀಕರಣದ ಮೇಲೆ ಕೇಂದ್ರೀಕರಿಸುವ ರಾಷ್ಟ್ರವನ್ನು ನಿರ್ಮಿಸಬೇಕು, ಅಲ್ಲಿ ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ನೀಡಬೇಕು” ಎಂದಿದ್ದಾರೆ.
ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ಇಂದು ಬೆಳಿಗ್ಗೆ 5: 30 ಕ್ಕೆ ಗಲ್ಲಿಗೇರಿಸಲಾಯಿತು. ಇವರುಗಳು 2012ರಲ್ಲಿ ದೆಹಲಿಯಲ್ಲಿ ಚಲಿಸುವ ಬಸ್ನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಆಕೆ ಬಳಿಕ ಇಹಲೋಕವನ್ನು ತ್ಯಜಿಸಿದ್ದಳು. ಈ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು.
ಸುದೀರ್ಘ ವಿಚಾರಣೆಯ ಬಳಿ ಅಪರಾಧಿಗಳ ಅಂತಿಮ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಎರಡು ಗಂಟೆಗಳ ನಂತರ ಮರಣದಂಡನೆ ವಿಧಿಸಲಾಯಿತು.
“ಅಪರಾಧಿಗಳು ಯಾವುದೇ ಕೊನೆಯ ಆಸೆ ಅಥವಾ ಇಚ್ಛೆಯನ್ನು ಅಧಿಕಾರಿಗಳ ಬಳಿ ವ್ಯಕ್ತಪಡಿಸಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Justice has prevailed.
It is of utmost importance to ensure dignity and safety of women.
Our Nari Shakti has excelled in every field. Together, we have to build a nation where the focus is on women empowerment, where there is emphasis on equality and opportunity.
— Narendra Modi (@narendramodi) March 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.