ನವದೆಹಲಿ: ಕೊರೋನಾವೈರಸ್ ತಡೆಗೆ ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ ‘ಜನತಾ ಕರ್ಫ್ಯೂ’ ಬಗ್ಗೆ ಭಾರತದಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಹೆಂಕ್ ಬೆಕೆಡಂ ಅವರು ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಜನತಾ ಕರ್ಫ್ಯೂ ಮಾರ್ಚ್ 22ರಂದು ಅನ್ವಯವಾಗಲಿದೆ.
“ಜನತಾ ಕರ್ಫ್ಯೂ ಮತ್ತು ಸಾಮಾಜಿಕ ದೂರವನ್ನು ಅಳವಡಿಸಿಕೊಳ್ಳಬೇಕೆಂದು ಪ್ರಧಾನಮಂತ್ರಿಯವರ ಕರೆಯನ್ನು ನಾವು ಸ್ವಾಗತಿಸುತ್ತೇವೆ. ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ಕಾರ್ಯತಂತ್ರದ ಪರಿಣಾಮಕಾರಿ ಅನುಷ್ಠಾನವು ನಮ್ಮನ್ನು ಬಹಳ ದೂರಕ್ಕೆ ಕರೆದುಕೊಂಡು ಹೋಗುತ್ತದೆ” ಎಂದು ಮೋದಿ ಅವರ ಭಾಷಣದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಬೆಕೆಡಮ್ ಹೇಳಿದ್ದಾರೆ.
“ಕೈ ಸ್ವಚ್ಛತೆಯ ಜೊತೆಗೆ, ಮುಖವನ್ನು ತೋಳುಗಳಿಂದ ಮಡಚಿ ಕೆಮ್ಮು ಮತ್ತು ಸೀನುವುದರಿಂದಲೂ ಪ್ರಸರಣವನ್ನು ತಡೆಯಬಹುದು. ಸಾಮಾಜಿಕವಾಗಿ ದೂರವಿರುವ ಜೊತೆಗೆ ಈ ಕ್ರಮಗಳನ್ನು ಅನುಸರಿಸಿದರೆ ಪ್ರಸರಣವನ್ನು ತಡೆಯಲು ಪರಿಣಾಮಕಾರಿಯಾಗಬಲ್ಲವು. ನಾವು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುತ್ತಿದ್ದರೂ ಸಹ, ಸವಾಲನ್ನು ಎದುರಿಸಿ ಜಯ ಗಳಿಸಬೇಕಾದರೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು” ಎಂದು ಬೆಕೆಡಮ್ ಹೇಳಿದ್ದಾರೆ.
ಗುರುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಮಾರ್ಚ್ 22ರಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸ್ವಯಂ ಕರ್ಫ್ಯೂ ಅನ್ನು ವಿಧಿಸುವಂತೆ ಕರೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.