ನವದೆಹಲಿ: ಭಾರತದಲ್ಲಿ ಶುಕ್ರವಾರ ಸಂಜೆ ಕೊರೋನವೈರಸ್ ಪ್ರಕರಣಗಳ ಒಟ್ಟು ಸಂಖ್ಯೆ 236ಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ದೃಢಪಡಿಸಿದೆ. ನಿನ್ನೆ ಸಂಜೆ 6 ಗಂಟೆಯವರೆಗೆ ಒಟ್ಟು 14,514 ವ್ಯಕ್ತಿಗಳಿಂದ ಒಟ್ಟು 15,404 ಸ್ಯಾಂಪಲ್ಗಳನ್ನು COVID-19 ಗಾಗಿ ಪರೀಕ್ಷಿಸಲಾಗಿದೆ. ಇಲ್ಲಿಯವರೆಗೆ, ಭಾರತವು ಒಟ್ಟು ನಾಲ್ಕು ಸಾವುಗಳಿಗೆ ಸಾಕ್ಷಿಯಾಗಿದೆ.
ಮಾರ್ಚ್ 22 ರಂದು ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ‘ಜನತಾ ಕರ್ಫ್ಯೂ’ ಮಾಡಬೇಕೆಂದು ಪ್ರಧಾನಿ ಮೋದಿ ಗುರುವಾರ ಕರೆ ನೀಡಿದ್ದಾರೆ. ಯಾವುದೇ ನಾಗರಿಕರು, ಅಗತ್ಯ ಸೇವೆಗಳಲ್ಲಿರುವವರನ್ನು ಹೊರತುಪಡಿಸಿ, ತಮ್ಮ ಮನೆಗಳಿಂದ ಹೊರಬರಬಾರದು ಎಂದಿದ್ದಾರೆ. ಕೊರೋನವೈರಸ್ ಸವಾಲನ್ನು ಸ್ವೀಕರಿಸಲು ಭಾರತದ ಸಿದ್ಧತೆಯನ್ನು ತೋರಿಸಲು ಇದೊಂದು ಲಿಟ್ಮಸ್ ಪರೀಕ್ಷೆಯಾಗಿದೆ, ಈ ಅನುಭವ ರಾಷ್ಟ್ರಕ್ಕೆ ಉತ್ತಮ ಸೇವೆ ಸಲ್ಲಿಸಲಿದೆ ಎಂದಿದ್ದಾರೆ.
“ಈ ಭಾನುವಾರ, ಅಂದರೆ ಮಾರ್ಚ್ 22 ರಂದು, ಎಲ್ಲಾ ನಾಗರಿಕರು ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಈ ಕರ್ಫ್ಯೂ ಅನ್ನು ಅನುಸರಿಸಬೇಕು. ಈ ಕರ್ಫ್ಯೂ ಸಮಯದಲ್ಲಿ, ನಾವು ನಮ್ಮ ಮನೆಗಳನ್ನು ಬಿಡುವುದಿಲ್ಲ ಅಥವಾ ಬೀದಿಗಿಳಿಯಬಾರದು ಮತ್ತು ನಮ್ಮ ಸೊಸೈಟಿಗಳಲ್ಲಿ ಅಥವಾ ಪ್ರದೇಶಗಳಲ್ಲಿ ತಿರುಗಾಡುವುದನ್ನು ತಪ್ಪಿಸುವ ಸಂಕಲ್ಪ ತೊಡೋಣ. ಕೇವಲ ತುರ್ತು ಮತ್ತು ಅಗತ್ಯ ಸೇವೆಗಳಿಗೆ ಸಂಬಂಧಿಸಿದವರು ತಮ್ಮ ಮನೆಗಳನ್ನು ತೊರೆಯಬಹುದು “ಎಂದು ಪ್ರಧಾನಿ ಹೇಳಿದ್ದಾರೆ.
ಅಲ್ಲದೇ ಕೊರೋನವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಸೇವಾ ಕಾರ್ಯಕರ್ತರಿಗೆ ಸಂಜೆ 5 ಗಂಟೆಗೆ ಮನೆಯ ಬಾಲ್ಕನಿ, ಬಾಗಿಲು, ಕಿಟಕಿಗಳ ಮುಂದೆ ನಿಂತು ಚಪ್ಪಾಳೆ ತಟ್ಟಿ, ಗಂಟೆ ಬಾರಿಸಿ ಅಭಿನಂದನೆಗಳನ್ನು ಸಲ್ಲಿಸುವಂತೆ ಮೋದಿ ಕರೆ ನೀಡಿದ್ದಾರೆ.
ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನವೈರಸ್ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬ ನಾಗರಿಕನು ಕೂಡ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.