ಲಕ್ನೋ: ದೇಶದಲ್ಲಿ ಕೊರೋನವೈರಸ್ ಮಹಾಮಾರಿಗೆ ತುತ್ತಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಂಪೂರ್ಣ ದೇಶವೇ ಲಾಕ್ಡೌನ್ ಸ್ಥಿತಿಯನ್ನು ಎದುರಿಸುತ್ತಿದೆ. ಇದರಿಂದಾಗಿ ಹೆಚ್ಚು ಬಾಧಿತರಾಗುವವರು ದಿನಗೂಲಿ ಕಾರ್ಮಿಕರು. ಒಂದು ದಿನ ದುಡಿಯದಿದ್ದರೆ ಹಲವರ ಹೊಟ್ಟೆಯ ತುಂಬುದಿಲ್ಲ ಎನ್ನುವ ಪರಿಸ್ಥಿತಿ ಇದೆ. ಅಂತವರು ಕೊರೋನವೈರಸ್ ಮಹಾಮಾರಿಗೆ ತೀವ್ರವಾಗಿ ಜರ್ಜರಿತಗೊಂಡಿದ್ದಾರೆ.
ದಿನಗೂಲಿ ಕಾರ್ಮಿಕರ ಈ ಸಂಕಷ್ಟವನ್ನು ಅರಿತುಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಮ್ಮ ರಾಜ್ಯದ 15 ಲಕ್ಷ ದಿನಗೂಲಿ ಕಾರ್ಮಿಕರಿಗೆ ಮತ್ತು 20.37 ಲಕ್ಷ ನಿರ್ಮಾಣ ಕಾರ್ಮಿಕರಿಗೆ 1,000 ರೂಪಾಯಿಗಳ ಧನ ಸಹಾಯವನ್ನು ಘೋಷಣೆ ಮಾಡಿದೆ.
ಅವರು ಶನಿವಾರ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಯೋಗಿ ಘೋಷಣೆಯನ್ನು ಮಾಡಿದ್ದಾರೆ. ಅಲ್ಲದೇ, ಕೊರೋನವೈರಸ್ನಿಂದ ಸೃಷ್ಟಿಯಾದ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಮಾಹಿತಿ ನೀಡಿದರು.
”ರಾಜ್ಯ ಸರ್ಕಾರವು ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ದಿನಕ್ಕೆ 15 ಲಕ್ಷ ಕೂಲಿ ಕಾರ್ಮಿಕರಿಗೆ ಮತ್ತು 20.37 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ 1,000 ರೂಗಳನ್ನು ನೀಡಲಿದೆ” ಎಂದಿದ್ದಾರೆ..
ನೇರ ಲಾಭ ವರ್ಗಾವಣೆ (ಡಿಬಿಟಿ) ವ್ಯವಸ್ಥೆಯನ್ನು ಬಳಸಿಕೊಂಡು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಕೊರೋನವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಅವರು ಜನರಿಗೆ ಮನವಿ ಮಾಡಿದರು. ರಾಜ್ಯವು ಸಮರ್ಪಕ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅಗತ್ಯ ಸರಕು ಮತ್ತು ಔಷಧಿಗಳ ಸಾಕಷ್ಟು ಸಂಗ್ರಹವನ್ನು ಹೊಂದಿದೆ ಎಂದು ಅವರು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.