ಬೆಂಗಳೂರು: ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿದೆ. ಪ್ರಸ್ತುತ ಕೊರೋನಾ ಪೀಡಿತರ ಸಂಖ್ಯೆ 256 ಎಂದು ಮೂಲಗಳು ತಿಳಿಸಿವೆ. ಈ ಆತಂಕದ ನಡುವೆಯೇ ಸಕರಾತ್ಮಕ ಸುದ್ದಿಗಳು ಹೊರಬಂದಿವೆ. ಅದೇನೆಂದರೆ, ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದವರು ಕೆಲವರು ಗುಣಮುಖರಾಗಿದ್ದಾರೆ ಮತ್ತು ಮನೆಗೆ ಹೋಗಲು ಸಂಪೂರ್ಣ ಸಜ್ಜಾಗಿದ್ದಾರೆ ಎಂಬುದು.
ಬೆಂಗಳೂರಿನಲ್ಲಿ ಕೊರೋನಾದಿಂದ ಪೀಡಿತಗೊಂಡಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ ಈಗ ಸಂಪೂರ್ಣ ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಎರಡೆರಡು ಬಾರಿ ಇವರ ಸ್ಯಾಂಪಲ್ ಅನ್ನು ಪರೀಕ್ಷೆಗೊಳಪಡಿಸಲಾಗಿದೆ.
ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಈ ವಿಷಯವನ್ನು ಈಗಾಗಲೇ ಖಚಿತಪಡಿಸಿದ್ದಾರೆ. ರಾಜ್ಯದಲ್ಲಿ 15 ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಐವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಕೋವಿಡ್ 19 ಪ್ರಕರಣಗಳ ಚಿಕಿತ್ಸೆಗಾಗಿ ರಾಜಧಾನಿಯಲ್ಲಿ 2000 ಹಾಸಿಗೆಗಳ ವಿಕ್ಟೋರಿಯಾ ಆಸ್ಪತ್ರೆಯನ್ನು ಕಾಯ್ದಿರಿಸುವ ಯೋಜನೆಯನ್ನು ಸಚಿವರು ಘೋಷಿಸಿದರು ಮತ್ತು 10,000 ಪ್ರಕರಣಗಳು ಇದ್ದರೂ ಸಹ ತೀವ್ರ ಸಂದರ್ಭದಲ್ಲಿ ಇದು ಸಹಾಯಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.
“ಈ ಇಬ್ಬರು ರೋಗಿಗಳ ಚೇತರಿಕೆ ರೋಗವು ಮಾರಕವಲ್ಲ ಎಂಬುದನ್ನು ಖಚಿರಪಡಿಸುತ್ತದೆ” ಎಂದು ಶ್ರೀರಾಮುಲು ಭರವಸೆ ನೀಡಿದರು.
ಲೈವ್ ಟ್ರ್ಯಾಕರ್ ಪ್ರಕಾರ, ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿರುವ ಭಾರತದ ಒಟ್ಟು ಪ್ರಕರಣಗಳ ಸಂಖ್ಯೆ ಪ್ರಸ್ತುತ 20 ಆಗಿದೆ. ಇದು ಇಲ್ಲಿಯವರೆಗೆ ದೃಢಪಡಿಸಿದ ಒಟ್ಟು ಪ್ರಕರಣಗಳಲ್ಲಿ ಶೇಕಡಾ 10ರಷ್ಟು ಸಾವು ಸಂಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.