ನವದೆಹಲಿ : ಕೊರೋನವೈರಸ್ ಮಹಾಮಾರಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ದೇಶದ ನಾಗರಿಕರು ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ಇದು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಸಮಯ ಮತ್ತು ಈ ನಿಟ್ಟಿನಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ನಮ್ಮ ಸಹಾಯಕ್ಕೆ ಬರುತ್ತದೆ” ಎಂದಿದ್ದಾರೆ.
ವಿತ್ತ ಸಚಿವರು ಮತ್ತು ಬ್ಯಾಂಕುಗಳು ಕೂಡ ನಾಗರಿಕರಿಗೆ ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಬಳಸುವಂತೆ ಕರೆ ನೀಡಿವೆ. ”ಒಂದು ವೇಳೆ ಪಾವತಿಗಳನ್ನು ಮಾಡಬೇಕೆಂದಿದ್ದರೆ ಡಿಜಿಟಲ್ ರೂಪದಲ್ಲಿ ಮಾಡಿ ಮತ್ತು ಸುರಕ್ಷಿತವಾಗಿರಿ” ಎಂದು ಹಣಕಾಸು ಸೇವಾ ಕಾರ್ಯದರ್ಶಿ ದೇವಶಿಷ್ ಪಾಂಡ ಹೇಳಿದ್ದಾರೆ. ಬ್ಯಾಂಕುಗಳು ಡಿಜಿಟಲ್ ಪಾವತಿ ವ್ಯವಸ್ಥೆಗೆ ಶುಲ್ಕವನ್ನು ಮನ್ನಾ ಮಾಡಿವೆ.
ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಗ್ರಾಹಕರುಗಳಿಗೆ ಆನ್ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಮಾಧ್ಯಮಗಳನ್ನು ವ್ಯವಹಾರಗಳಿಗೆ ಬಳಸಿಕೊಳ್ಳುವಂತೆ ಮತ್ತು ಬ್ಯಾಂಕ್ ಬ್ರಾಂಚ್ಗಳಿಗೆ ತೆರಳುವುದನ್ನು ತಪ್ಪಿಸುವಂತೆ ಕರೆ ನೀಡಿವೆ.
ಒಂದು ವೇಳೆ ತೀರಾ ಅವಶ್ಯಕ ಎನಿಸಿದರೆ ಮಾತ್ರ ಬ್ಯಾಂಕುಗಳಿಗೆ ತೆರಳಿ ಎಂದು ಹೇಳಿದೆ. ‘ಕೊರೋನ ಸೆ ಡರೊ ನ, ಡಿಜಿಟಲ್ ಕರೋ ನ’ ಎಂಬ ಜ್ಞಾನವನ್ನು ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಆರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.