ನವದೆಹಲಿ: ಕೊರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದ 80 ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲಾಗಿದೆ. ಆದರೂ ಜನರು ಇದನ್ನು ಗಂಭೀರವಾಗಿ ಪರಿಗಣಿಸದೆ ತಮಗೆ ತೋಚಿದಂತೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
“ಹಲವು ಜನರು ಲಾಕ್ಡೌನ್ಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದಯವಿಟ್ಟು ನಿಮ್ಮನ್ನು, ನಿಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳಿ. ನಿಯಮಗಳನ್ನು ಮತ್ತು ಕಾನೂನುಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸಿ ಎಂದು ರಾಜ್ಯ ಸರ್ಕಾರಗಳಿಗೆ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಜನರು ಸ್ವಯಂ ನಿರ್ಬಂಧವನ್ನು ವಿಧಿಸಿಕೊಳ್ಳದ ಹೊರತು ಈ ಪ್ರಕರಣಗಳನ್ನು ಹತೋಟಿಗೆ ತರುವುದು ಕಷ್ಟಕರವಾಗಿದೆ. ಇದಕ್ಕಾಗಿಯೇ ಸರ್ಕಾರಗಳು ಕೆಲವೊಂದು ಜಿಲ್ಲೆಗಳಲ್ಲಿ ಲಾಕ್ಡೌನ್ ಅನ್ನು ಘೋಷಣೆ ಮಾಡಿವೆ. ಜನರು ಮನೆಯಲ್ಲಿ ಇರಲಿ, ಸಭೆ-ಸಮಾರಂಭಗಳನ್ನು ನಡೆಸದಿರಲು, ಗುಂಪು ಕಟ್ಟಿ ನಿಲ್ಲದಿರಲಿ ಎಂಬುದು ಇದರ ಉದ್ದೇಶವಾಗಿದೆ. ಆದರೆ ಕೆಲವರು ಇದನ್ನು ಇನ್ನೂ ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಭಾನುವಾರ ದೇಶದಲ್ಲಿ ಜನತಾ ಕರ್ಫ್ಯೂ ಅನ್ನು ಆಚರಿಸಲಾಗಿತ್ತು. ಇದಕ್ಕೆ ಅಭೂತಪೂರ್ವ ರೀತಿಯಲ್ಲಿ ಬೆಂಬಲ ದೊರೆತಿತ್ತು. ಆದರೆ ಸೋಮವಾರದಿಂದ ಜನರು ಎಂದಿನಂತೆ ಮಾರುಕಟ್ಟೆಗಳಿಗೆ ಆಗಮಿಸಲು ಶುರು ಮಾಡಿಕೊಂಡಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.
ನಾಗಪುರದಲ್ಲಿ ಪೋಲೀಸರು ನಿರ್ದೇಶನಗಳನ್ನು ಉಲ್ಲಂಘಿಸಿದ ಸುಮಾರು 878 ಜನರ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಕೆಲವೊಂದು ಅಂಗಡಿ ಮಾಲೀಕರ ಮೇಲೆಯೂ ಪ್ರಕರಣ ದಾಖಲಾಗಿದೆ.
ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳ ಸಂಖ್ಯೆ 400 ಕ್ಕೆ ಏರಿದ್ದು, ಸಾವಿನ ಸಂಖ್ಯೆ 8 ಕ್ಕೆ ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.