ನವದೆಹಲಿ: ಕೊರೋನವೈರಸ್ ಮಹಾಮಾರಿಯ ವಿರುದ್ಧ ಜನಜಾಗೃತಿ ಮೂಡಿಸುವ ಸರ್ಕಾರದ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಕೈಜೋಡಿಸಿದೆ.
ಶುಚಿತ್ವ ಮತ್ತು ಆರೋಗ್ಯದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸುವಂತೆ ಆರ್ಎಸ್ಎಸ್ ಸರಕಾರ್ಯವಾಹರಾದ ಸುರೇಶ್ ಭೈಯ್ಯಾಜಿ ಜೋಷಿ ಅವರು ಸ್ವಯಂಸೇವಕರಿಗೆ ಕರೆ ನೀಡಿದ್ದಾರೆ. ಅಲ್ಲದೆ, ಅಗತ್ಯ ಇರುವವರಿಗೆ ಆಹಾರವನ್ನು ಒದಗಿಸುವಂತಹ ವ್ಯವಸ್ಥೆ ಮಾಡುವಂತೆಯೂ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಹೇಳಿಕೆಯನ್ನು ಹೊರಡಿಸಲಾಗಿದ್ದು, ಅಗತ್ಯತೆಗಳ ಬಗ್ಗೆ ಅರಿತುಕೊಳ್ಳುವ ಸಲುವಾಗಿ ಆಡಳಿತಗಳೊಂದಿಗೆ ಸಂಪರ್ಕದಲ್ಲಿರುವಂತೆ ಸ್ವಯಂಸೇವಕರಿಗೆ ಸೂಚಿಸಲಾಗಿದೆ.
ಕೊರೋನವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪಾಲಿಸುವಂತೆ ಮತ್ತು ಸರ್ಕಾರದೊಂದಿಗೆ ಸಹಕರಿಸುವಂತೆಯೂ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
मा. सरकार्यवाह, सुरेश (भय्याजी) जोशी का वक्तव्य :
सभी स्वयंसेवक समाज में स्वच्छता, स्वास्थ्य जागरूकता को लेकर छोटे-छोटे गुटों में संवाद करने की योजना करें तथा जरूरतमंद लोगों को भोजन सामग्री पहुंचाने की व्यवस्था करें.
1/2 pic.twitter.com/5TGKtoNrYk— RSS (@RSSorg) March 23, 2020
ಸ್ವಯಂಸೇವಕರು ಸಾಮಾಜಿಕ ಅಂತರದ ನಿರ್ದೇಶನಗಳನ್ನು ಪಾಲಿಸಬೇಕು, ಅಗತ್ಯವಿರುವ ಜನರನ್ನು ಗುರುತಿಸಿ ಅವರನ್ನು ತಲುಪಬೇಕು ಎಂದಿದ್ದಾರೆ.
“ದಿನಗೂಲಿ ಕಾರ್ಮಿಕರ ಸಂಖ್ಯೆ ಅಪಾರ ಪ್ರಮಾಣದಲ್ಲಿದೆ. ಅವರ ಆದಾಯಕ್ಕೆ ಹಿನ್ನಡೆಯಾಗಿದೆ. ಅವರಿಗೆ ಜೀವನ ಕಳೆಯುವುದೇ ಕಷ್ಟವಾಗಬಹುದು. ಸಾಮಾಜಿಕ ಅಂತರದ ನಿರ್ದೇಶನವನ್ನು ಉಲ್ಲಂಘಿಸದ ಅವರಿಗೆ ನಾವು ಹೇಗೆ ಆಹಾರವನ್ನು ಒದಗಿಸಬಹುದು ಮತ್ತು ಇತರ ಸೌಲಭ್ಯಗಳನ್ನು ಒದಗಿಸಬಹುದು ಎಂಬ ಪ್ರಯತ್ನಗಳನ್ನು ಆರಂಭಿಸಿದ್ದೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.