ನವದೆಹಲಿ: ಕೊರೋನವೈರಸ್ ವಿರುದ್ಧ ಭಾರತದ ಹೋರಾಟಕ್ಕೆ ವೇದಾಂತ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಗರ್ವಾಲ್ ಭಾನುವಾರ 100 ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ.
ಟ್ವೀಟ್ ಮಾಡಿರುವ ಅಗರ್ವಾಲ್ ಅವರು, ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂಪಾಯಿಗಳನ್ನು ನೀಡುತ್ತೇನೆ” ಎಂದಿದ್ದಾರೆ.
ಅಲ್ಲದೆ ನಿನ್ನೆ ಸಂಜೆ 5 ಗಂಟೆಗೆ ಅವರು ಕೊರೋನವೈರಸ್ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ಸಮರ್ಪಣೆ ಮಾಡುತ್ತಿರುವ ತಮ್ಮ ವಿಡಿಯೋವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ.
“ದೇಶದ ಅವಶ್ಯಕತೆಗಳಿಗಾಗಿ ಎಂಬ ಪ್ರತಿಜ್ಞೆಯನ್ನು ನಾವು ಕೈಗೊಂಡಿದ್ದೇವೆ. ಈ ಸಮಯದಲ್ಲಿ ನಮ್ಮ ದೇಶಕ್ಕೆ ನಮ್ಮ ಅವಶ್ಯಕತೆ ತುಂಬಾನೇ ಇದೆ. ನಮ್ಮ ಸಾಕಷ್ಟು ಜನರು ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ ಮತ್ತು ನನಗೆ ದಿನಗೂಲಿ ಕಾರ್ಮಿಕರ ಬಗ್ಗೆ ಕಾಳಜಿ ಉಂಟಾಗುತ್ತಿದೆ. ಅವರಿಗೆ ಸಹಾಯ ಮಾಡಲು ನಾವು ತುಸು ನೆರವಾಗಬೇಕಿದೆ” ಎಂದಿದ್ದಾರೆ.
I am committing 100 cr towards fighting the Pandemic. #DeshKiZarooratonKeLiye is a pledge that we undertook & this is the time when our country needs us the most. Many people are facing uncertainty & I’m specially concerned about the daily wage earners, we will do our bit to help pic.twitter.com/EkxOhTrBpR
— Anil Agarwal (@AnilAgarwal_Ved) March 22, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.