ನವದೆಹಲಿ: ಕೊರೋನವೈರಸ್ ಕಾರಣದಿಂದಾಗಿ ದೇಶದಲ್ಲಿ ಉದ್ಭವಿಸಿರುವ ಆತಂಕದ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ವ್ಯಾಪಕವಾಗಿ ಹಬ್ಬುತ್ತಿರುವ ನಕಲಿ ಸುದ್ದಿಗಳನ್ನು ಹತ್ತಿಕ್ಕಲು ಮುಂದಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದೆ.
ಸಮಾಜದಲ್ಲಿ ಆತಂಕವನ್ನು ಸೃಷ್ಟಿ ಮಾಡುವಂತಹ ಯಾವುದೇ ತಪ್ಪು ಮಾಹಿತಿಗಳು ಹರಿದಾಡುವಂತೆ ನೋಡಿಕೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸರಕಾರ ಸೂಚಿಸಿದೆ.
“ಕೊರೋನವೈರಸ್ ಬಿಕ್ಕಟ್ಟು ಈಗ ಜಾಗತಿಕ ಕಾಳಜಿಯ ವಿಷಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿ ಎಂದು ಘೋಷಿಸಿದೆ. ವೈರಸ್ ಹರಡುವುದನ್ನು ತಡೆಗಟ್ಟಲು ಎಲ್ಲಾ ದೇಶಗಳು ತಮ್ಮಿಂದಾದ ಪ್ರಯತ್ನಗಳನ್ನು ನಡೆಸುತ್ತಿವೆ. ಆದರೆ ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವಾರು ತಪ್ಪು ಮಾಹಿತಿಗಳನ್ನು ಮತ್ತು ನಕಲಿ ಸುದ್ದಿಗಳನ್ನು ಹರಿಬಿಡುವ ಮೂಲಕ ಜನರಲ್ಲಿ ಆತಂಕವನ್ನು ಮೂಡಿಸಲಾಗುತ್ತಿದೆ ಎಂಬ ವರದಿಗಳು ಬರುತ್ತಿವೆ. ಇಂತಹ ನಕಲಿ ಸುದ್ದಿಗಳು ತಮ್ಮ ವೇದಿಕೆಯಲ್ಲಿ ಪ್ರಸಾರವಾಗದಂತೆ ಜವಾಬ್ದಾರಿ ತೆಗೆದುಕೊಳ್ಳಬೇಕಾದದ್ದು ಸಾಮಾಜಿಕ ಮಾಧ್ಯಮಗಳ ಕರ್ತವ್ಯ” ಎಂದು ಎಂದು ನಿರ್ದೇಶನದಲ್ಲಿ ಸೂಚಿಸಲಾಗಿದೆ.
ಜಾಗೃತಿ ಅಭಿಯಾನಗಳನ್ನು ತಮ್ಮ ತಮ್ಮ ವೇದಿಕೆಗಳಲ್ಲಿ ನಡೆಸುವಂತೆ, ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಬಗೆಗಿನ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಸರಕಾರವು ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದೆ. ಅಲ್ಲದೆ ನಿಖರವಾದ ವರದಿಗಳನ್ನು ಮಾತ್ರ ಪ್ರಸಾರವಾಗುವುದನ್ನು ಖಚಿತ ಪಡಿಸಿಕೊಳ್ಳುವಂತೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.