ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದ ನರಳುತ್ತಿರುವವರಿಗೆ ಕೇಂದ್ರ ಸರ್ಕಾರ ತುಸು ನೆಮ್ಮದಿಯನ್ನು ನೀಡಿದೆ. ರಾಷ್ಟ್ರೀಯ ಆರೋಗ್ಯ ಮಂಡಳಿಯು ಆಯುಷ್ಮಾನ್ ಭಾರತ ಯೋಜನೆಯಡಿ ಕೊರೋನ ವೈರಸ್ ಚಿಕಿತ್ಸೆಗಾಗಿ ಪ್ಯಾಕೇಜನ್ನು ಪರಿಚಯಿಸಿದೆ.
ಅಧಿಕಾರಿಗಳ ಪ್ರಕಾರ, ಆಡಳಿತ ಮಂಡಳಿಯು ಕೊನೆಯದಾಗಿ ನಡೆಸಿದ ಸಭೆಯಲ್ಲಿ ಈ ಪ್ಯಾಕೇಜನ್ನು ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
“ಆಯುಷ್ಮಾನ್ ಭಾರತ ಯೋಜನೆಯ ಅರ್ಹ ಫಲಾನುಭವಿಗಳು ಸಾಂಕ್ರಾಮಿಕ ರೋಗಕ್ಕೂ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಕೋವಿಡ್-19 ಪರೀಕ್ಷೆ ಮತ್ತು ಚಿಕಿತ್ಸೆಯು ಸರ್ಕಾರ ರಚಿತ ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಗುತ್ತಿದೆ” ಎಂದು ಆಯುಷ್ಮಾನ್ ಭಾರತ ಯೋಜನೆಯ ಸಿಇಓ ಡಾ. ಇಂದು ಭೂಷಣ್ ತಿಳಿಸಿದ್ದಾರೆ.
“ಒಂದು ವೇಳೆ ಸರಕಾರವು ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೂ ಅನುಮತಿಯನ್ನು ನೀಡಿದರೆ, ರೋಗಿಗಳು ಖಾಸಗಿ ಆರೋಗ್ಯ ಕೇಂದ್ರದಲ್ಲೂ ಉಚಿತವಾಗಿ ಆಯುಷ್ಮಾನ್ ಭಾರತ ಯೋಜನೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ” ಎಂದಿದ್ದಾರೆ.
ಆಯುಷ್ಮಾನ್ ಭಾರತ ಯೋಜನೆಯು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದರಡಿ ಒಂದು ಕುಟುಂಬದ ಸದಸ್ಯರಿಗೆ ವಾರ್ಷಿಕವಾಗಿ 5 ಲಕ್ಷ ರೂಪಾಯಿವರೆಗಿನ ಆರೋಗ್ಯಸೇವೆಗಳು ಉಚಿತವಾಗಿ ಸಿಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.