ನವದೆಹಲಿ: ಕೊರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ದೇಶದಲ್ಲಿ 21 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಡಬಗ್ಗರಿಗೆ ಆಹಾರವನ್ನು ಒದಗಿಸುವ ಮಹತ್ವದ ನಿರ್ಧಾರವನ್ನು ಬಿಜೆಪಿ ಕೈಗೊಂಡಿದೆ.
ವಿಶ್ವದ ಅತಿ ದೊಡ್ಡ ಪಕ್ಷ ಎನಿಸಿರುವ ಬಿಜೆಪಿ ಇದೀಗ 21 ದಿನಗಳ ಕಾಲ 5 ಕೋಟಿ ಜನರಿಗೆ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಾಷ್ಟ್ರೀಯ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 5 ಕೋಟಿ ಬಡವರಿಗೆ ದೇಶದಾದ್ಯಂತ ಆಹಾರವನ್ನು ಒದಗಿಸುವ ಮಹತ್ವದ ಕಾರ್ಯವನ್ನು ಕಾರ್ಯಕರ್ತರಿಗೆ ವಹಿಸಲಾಗಿದೆ.
ಇದಕ್ಕಾಗಿ ದೇಶದಾದ್ಯಂತ ಇರುವ ಕಮ್ಯೂನಿಟಿ ಕಿಚನ್ಗಳನ್ನು ಜೋಡಿಸಲು ಯಾಂತ್ರಿಕ ವ್ಯವಸ್ಥೆಯನ್ನು ಬಿಜೆಪಿ ರೂಪಿಸಿದೆ.
21 ದಿನಗಳ ಲಾಕ್ಡೌನ್ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ ದೊಡ್ಡಮಟ್ಟದ ಹೊಡೆತ ಬೀಳಲಿದೆ. ಜೀವನೋಪಾಯವಿಲ್ಲದೆ ಅವರು ಪರಿತಪಿಸುವ ಸಾಧ್ಯತೆ ಇರುತ್ತದೆ. ಈಗ ಇದನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿಯೂ ಆಹಾರವನ್ನು ಒದಗಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ದೇಶದಲ್ಲಿ ಪ್ರಸ್ತುತ ಕೊರೋನಾ ವೈರಸ್ ಪ್ರಕರಣಗಳು 649 ಕ್ಕೆ ಏರಿದೆ. 13 ಮಂದಿ ಮೃತಪಟ್ಟಿದ್ದಾರೆ. ಈ ಸಾಂಕ್ರಾಮಿಕ ಮಹಾಮಾರಿ ಹರಡುವುದನ್ನು ತಡೆಗಟ್ಟಲು ಇರುವ ಏಕೈಕ ಮಾರ್ಗವೆಂದರೆ ಅದು ಸಂಪೂರ್ಣ ಲಾಕ್ಡೌನ್. ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.