ನವದೆಹಲಿ: ಕೊರೋನವೈರಸ್ ತಡೆಗಟ್ಟಲು ಭಾರತ ಸೇರಿದಂತೆ ವಿವಿಧ ದೇಶಗಳು ಜಾರಿಗೊಳಿಸಿರುವ ಲಾಕ್ಡೌನ್ ಕ್ರಮಗಳಿಂದ ಮಾತ್ರ ಮಾರಣಾಂತಿಕ ವೈರಸ್ ಅನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕೊರೋನವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧನೊಮ್ ಘೆಬ್ರೆಯೆಸಸ್ ಅವರು, “ವೈರಸ್ ಹರಡುವಿಕೆಯನ್ನು ತಗ್ಗಿಸುವ ಸಲುವಾಗಿ ಅನೇಕ ದೇಶಗಳು ಲಾಕ್ಡೌನ್ ಕ್ರಮಗಳನ್ನು ತೆಗೆದುಕೊಂಡಿದೆ. ಈ ಕ್ರಮಗಳಿಂದ ವೈರಸ್ ನಿರ್ಮಲನೆಗೊಳಿಸಲು ಸಾಧ್ಯವಾಗುವುದಿಲ್ಲ. ಈ ಸಂದರ್ಭದಲ್ಲಿ ಎಲ್ಲಾ ದೇಶಗಳು ವೈರಸ್ ವಿರುದ್ಧ ದಾಳಿ ನಡೆಸಲು ಮುಂದಾಗಬೇಕು ಎಂಬುದು ನಮ್ಮ ಕರೆಯಾಗಿದೆ. ಪ್ರಸ್ತುತ ನಾವು ಎರಡನೇ ಅವಕಾಶವನ್ನು ಸೃಷ್ಟಿ ಮಾಡಲೇಬೇಕಿದೆ” ಎಂದಿದ್ದಾರೆ.
“ಮನೆಯಲ್ಲಿ ಇದ್ದುಬಿಡಿ ಎಂದು ಕರೆ ನೀಡುವುದು ಮತ್ತು ಜನರ ಓಡಾಟವನ್ನು ನಿರ್ಬಂಧಿಸುವುದು ಖರೀದಿ ಸಮಯ ಮತ್ತು ಆರೋಗ್ಯ ವ್ಯವಸ್ಥೆ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಆದರೆ ಈ ಕ್ರಮಗಳು ಸಂಪೂರ್ಣ ವೈರಸ್ ಅನ್ನು ನಿರ್ಮೂಲನೆ ಮಾಡುವುದಿಲ್ಲ” ಎಂದು ಟೆಡ್ರೋಸ್ ಹೇಳಿದ್ದಾರೆ.
“ಈ ಸಂದರ್ಭವನ್ನು ವೈರಸ್ ಮೇಲೆ ದಾಳಿ ನಡೆಸಲು ಬಳಸಿಕೊಳ್ಳಿ ಎಂದು ನಾನು ಲಾಕ್ಡೌನ್ ಅನ್ನು ಜಾರಿಗೊಳಿಸಿರುವ ದೇಶಗಳಿಗೆ ಹೇಳಲು ಬಯಸುತ್ತೇನೆ. ಎರಡನೇ ಅವಕಾಶವನ್ನು ನೀವು ಹೇಗೆ ಬಳಸಿಕೊಳ್ಳುತ್ತೀರಿ ಎಂಬುದರ ಮೇಲೆ ಎಲ್ಲವೂ ನಿಂತಿದೆ” ಎಂದಿದ್ದಾರೆ.
“ಶಂಕಿತರ ಪತ್ತೆಹಚ್ಚುವಿಕೆ, ಚಿಕಿತ್ಸೆ, ಪ್ರತ್ಯೇಕವಾಸಗಳಲ್ಲಿ ಆಕ್ರಮಣಕಾರಿ ಕ್ರಮಗಳು ವೈರಸ್ ನಿರ್ಮೂಲನೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ” ಎಂದಿದ್ದಾರೆ.
ಜಾಗತಿಕ ಮಟ್ಟದಲ್ಲಿ ಕೊರೋನ ವೈರಸ್ಗೆ ಸಾವಿಗೀಡಾದವರ ಸಂಖ್ಯೆ 20,499ಕ್ಕೆ ಏರಿಕೆಯಾಗಿದೆ. ಒಟ್ಟು ದೃಢಪಟ್ಟ ಪ್ರಕರಣಗಳ ಸಂಖ್ಯೆ 4,51,556 ಕ್ಕೆ ಏರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.