ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಬಡವರಿಗೆ ಕೇಂದ್ರ ಸರ್ಕಾರವು ರೂ 1.7 ಲಕ್ಷ ಕೋಟಿಗಳ ಪ್ಯಾಕೇಜನ್ನು ಘೋಷಣೆ ಮಾಡಿದೆ.
ಮಾತ್ರವಲ್ಲದೆ, ಕೊರೋನ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ರೂ 50 ಲಕ್ಷದ ವೈದ್ಯಕೀಯ ವಿಮೆಯನ್ನು ಘೋಷಣೆ ಮಾಡಿದೆ.
ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದು, “ನಗರ ಬಡವರು ಮತ್ತು ವಲಸಿಗ ಕಾರ್ಮಿಕರು ಸೇರಿದಂತೆ ದಿನಗೂಲಿ ಕಾರ್ಮಿಕರಿಗೆ ಮತ್ತು ಇತರ ಅಗತ್ಯವುಳ್ಳವರಿಗೆ ಪ್ಯಾಕೇಜ್ ಸಿದ್ಧವಾಗಿದೆ. ಯಾರೊಬ್ಬರೂ ಹಸಿವಿನಿಂದ ಇರಬೇಕಾಗಿಲ್ಲ. ರೂ 1.7 ಲಕ್ಷ ಕೋಟಿಗಳ ಪ್ಯಾಕೇಜನ್ನು ಒದಗಿಸಲಾಗುತ್ತದೆ” ಎಂದಿದ್ದಾರೆ.
ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯ ಮೂಲಕ 1,70,000 ಕೋಟಿ ರೂಪಾಯಿಗಳ ಪ್ಯಾಕೇಜನ್ನು ಬಡವರಿಗಾಗಿ ಒದಗಿಸಲಾಗುತ್ತದೆ ಎಂದಿದ್ದಾರೆ.
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ 50 ಲಕ್ಷ ರೂಪಾಯಿಗಳನ್ನು ಒದಗಿಸುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.