ಮುಂಬೈ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಇಡೀ ದೇಶ ಹೋರಾಟ ನಡೆಸುತ್ತಿದೆ. ಈ ಹೋರಾಟದಲ್ಲಿ ವಿವಿಧ ಸಂಸ್ಥೆಗಳು ಕೈಜೋಡಿಸಿವೆ. ಬಜಾಜ್ ಗ್ರೂಪ್ 100 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ.
ಭಾರತದ ಮತ್ತೊಂದು ಪ್ರಮುಖ ಉದ್ಯಮವಾದ ಗೋದ್ರೆಜ್ 50 ಕೋಟಿ ರೂಪಾಯಿಗಳನ್ನು ವೈರಸ್ ವಿರುದ್ಧದ ಹೋರಾಟಕ್ಕೆ ನೀಡುವುದಾಗಿ ಘೋಷಣೆ ಮಾಡಿದೆ.
ದೇಶದ ಆರೋಗ್ಯ ಸೇವಾ ಮೂಲಸೌಕರ್ಯಗಳನ್ನು ಸುಧಾರಣೆಗೊಳಿಸುವ ಮತ್ತು ಬಡವರಿಗೆ ಅಗತ್ಯವನ್ನು ಪೂರೈಸುವ ಮತ್ತು ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಕಾರ್ಯಕ್ರಮಗಳನ್ನು ಬಲಪಡಿಸುವ ಕಾರ್ಯಗಳಿಗೆ ಈ ಹಣವನ್ನು ವಿನಿಯೋಗ ಮಾಡಿಕೊಳ್ಳಲಾಗುತ್ತದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಜಾಜ್ ಗ್ರೂಪ್ ಮುಖ್ಯಸ್ಥ ರಾಹುಲ್ ಬಜಾಜ್ ಅವರು, “ಸರ್ಕಾರದೊಂದಿಗೆ ಮತ್ತು ನಮ್ಮ ಇನ್ನೂರಕ್ಕೂ ಅಧಿಕ ಎನ್ಜಿಓ ಪಾಲುದಾರರೊಂದಿಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ. ಸಂಪನ್ಮೂಲಗಳು ಅಗತ್ಯವಿರುವವರಿಗೆ ತಲುಪುವ ನಿಟ್ಟಿನಲ್ಲಿ ನಾವು ಕಾರ್ಯ ಮಾಡುತ್ತಿದ್ದೇವೆ” ಎಂದಿದ್ದಾರೆ.
ಈ ಹಿಂದೆ ವೇದಾಂತ, ಆಕ್ಸಿಸ್ ಬ್ಯಾಂಕ್ ಮತ್ತು ಹಿಂದುಸ್ತಾನಿ ಲಿವರ್ ತಲಾ 3 ಕೋಟಿ ರೂಪಾಯಿಗಳನ್ನು ಸಾರ್ವಜನಿಕ ಆರೋಗ್ಯ ಸೇವೆ ಮತ್ತು ಇತರ ಕಾರ್ಯಕ್ರಮಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದವು.
ಗೋದ್ರೆಜ್ ಸಂಸ್ಥೆ 50 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ. ಅದರೊಂದಿಗೆ ಅದು ಮಹಾರಾಷ್ಟ್ರದಲ್ಲಿ ಸರ್ಕಾರಿ ಆಸ್ಪತ್ರೆಗೆ ಅದು 115 ಬೆಡ್ಗಳನ್ನು ದಾನ ಮಾಡಿದೆ. ಅಲ್ಲದೆ, 75 ಬೆಡ್ಗಳುಳ್ಳ ಕ್ವಾರಂಟೈನ್ ಸೆಂಟರ್ ಸ್ಥಾಪನೆ ಮಾಡುವಲ್ಲಿಯೂ ಸರ್ಕಾರಕ್ಕೆ ಸಹಾಯ ಮಾಡಿದೆ. ಮಾತ್ರವಲ್ಲದೆ ಇದು ವೈದ್ಯಕೀಯ ಪರಿಕರ ಮತ್ತು ರಕ್ಷಣಾ ಸಾಮಾಗ್ರಿಗಳನ್ನು ಕೂಡ ಸರಕಾರಿ ಏಜೆನ್ಸಿಗೆ ನೀಡುವುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.