ನವದೆಹಲಿ: 90ರ ದಶಕದಲ್ಲಿ ಭಾರಿ ಜನಪ್ರಿಯತೆಯನ್ನು ಗಳಿಸಿದ್ದ ರಮಾನಂದ ಸಾಗರ್ ಅವರ ನಿರ್ದೇಶನದ ರಾಮಾಯಣ ಧಾರವಾಹಿ ದೂರದರ್ಶನದಲ್ಲಿ ಮಾರ್ಚ್ 28 ರಿಂದ ಮರು ಪ್ರಸಾರವಾಗಲಿದೆ.
ಮಾರ್ಚ್ 28 ರಿಂದ ಜನರು ದಿನದಲ್ಲಿ ಎರಡು ಬಾರಿ ರಾಮಾಯಣ ಧಾರಾವಾಹಿಯನ್ನು ವೀಕ್ಷಣೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ ಎಂದು ಕೇಂದ್ರ ಪ್ರಸಾರ ಮತ್ತು ಮಾಹಿತಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.
ಜನರ ಬೇಡಿಕೆಯ ಮೇರೆಗೆ ರಾಮಾಯಣವನ್ನು ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಮೊದಲ ಸಂಚಿಕೆ ಪ್ರಸಾರವಾಗಲಿದೆ. ಮತ್ತೊಂದು ರಾತ್ರಿ 9 ರಿಂದ 10 ಗಂಟೆಯವರೆಗೆ ಪ್ರಸಾರವಾಗಲಿದೆ ಎಂದು ಜಾವ್ಡೇಕರ್ ಮಾಹಿತಿಯನ್ನು ನೀಡಿದ್ದಾರೆ.
जनता की मांग पर कल शनिवार 28 मार्च से ‘रामायण’ का प्रसारण पुनः दूरदर्शन के नेशनल चैनल पर शुरू होगा। पहला एपिसोड सुबह 9.00 बजे और दूसरा एपिसोड रात 9.00 बजे होगा । @narendramodi
@PIBIndia@DDNational— Prakash Javadekar (@PrakashJavdekar) March 27, 2020
Union I&B minister @PrakashJavdekar:
Happy to announce that on public demand, we are starting the re-telecast of ‘Ramayana’ from tomorrow (Saturday, March 28) on @DDNational
– One episode in the morning 9 am to 10 am
– Another in the evening 9 pm to 10 pm pic.twitter.com/LKdHIdXVce— DD News (@DDNewslive) March 27, 2020
ಬಿ ಆರ್ ಚೋಪ್ರಾ ಅವರ ನಿರ್ದೇಶನದ ಮಹಾಭಾರತವನ್ನು ಮತ್ತು ರಮಾನಂದ ಸಾಗರ್ ಅವರ ರಾಮಾಯಣವನ್ನು ಮತ್ತೆ ಪ್ರಸಾರ ಗೊಳಿಸುವಂತೆ ಅಭಿಮಾನಿಗಳು ಬೇಡಿಕೆಯನ್ನು ಇಡುತ್ತಲೇ ಬಂದಿದ್ದರು. ಈ ಬಗ್ಗೆ ಪ್ರಸಾರ ಭಾರತೀಯ ಸಂಬಂಧಪಟ್ಟವರೊಂದಿಗೆ ಮಾತುಕತೆಯನ್ನು ಕೂಡ ನಡೆಸಿತ್ತು.
ಇದೀಗ ರಾಮಾಯಣ ನಾಳೆಯಿಂದಲೇ ತೆರೆ ಮೇಲೆ ಮೂಡಿಬರಲಿದೆ. ಲಾಕ್ಡೌನ್ ಪರಿಣಾಮವಾಗಿ ಮನೆಯಲ್ಲೇ ಇರುವ ಜನರು 90ರ ದಶಕದ ಸೂಪರ್ ಹಿಟ್ ದಾರವಾಹಿ ರಾಮಾಯಣವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.