ನವದೆಹಲಿ: ಕೊರೋನವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಹೋರಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವುದು ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮೂರು ತಿಂಗಳುಗಳ ಅವಧಿಯೊಳಗೆ 40 ಸಾವಿರ ವೆಂಟಿಲೇಟರ್ ಗಳನ್ನು ಖರೀದಿ ಮಾಡಲು ಮುಂದಾಗಿದೆ.
ಪ್ರಸ್ತುತ ಭಾರತದಲ್ಲಿ ಕರೋನವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಾವಿರದ ಗಡಿಯನ್ನು ತಲುಪಲು ಇನ್ನು ಕೆಲವೇ ಸಂಖ್ಯೆಗಳು ಬಾಕಿ ಇದೆ. 20 ಸಾವಿನ ಪ್ರಕರಣಗಳು ಈಗಾಗಲೇ ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.
ಹೀಗಾಗಿ ಮುಂಬರುವ ದಿನಗಳಲ್ಲಿ ವೆಂಟಿಲೇಟರ್ ಸೇರಿದಂತೆ ಯಾವುದೇ ವೈದ್ಯಕೀಯ ಸೌಲಭ್ಯಗಳ ಕೊರತೆ ಉಂಟಾಗದಂತೆ ಕೇಂದ್ರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ” ಈಗಾಗಲೇ ಸಚಿವಾಲಯವು ಪಿ ಎಸ್ ಯುಗಳ ಮೂಲಕ 10,000 ವೆಂಟಿಲೇಟರ್ಗಳನ್ನು ಮತ್ತು ಭಾರತ ಎಲೆಕ್ಟ್ರಿಕಲ್ಸ್ ಮೂಲಕ 30000 ವೆಂಟಿಲೇಟರ್ಗಳನ್ನು ಉತ್ಪಾದನೆ ಮಾಡಲು ಆದೇಶಿಸಿದೆ” ಎಂದಿದ್ದಾರೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದಲ್ಲಿ ಕೊರೋನ ವೈರಸ್ ದೃಢೀಕೃತ ಪ್ರಕರಣಗಳು 873 ಆಗಿದ್ದು, ಈಗಾಗಲೇ 79 ಮಂದಿ ರೋಗಿಗಳು ಚೇತರಿಸಿಕೊಂಡಿದ್ದಾರೆ.
ವಿದೇಶದಿಂದ ಬಂದ ಸಾವಿರಾರು ಮಂದಿಯ ಮೇಲೆ ತೀವ್ರ ಸ್ವರೂಪದಲ್ಲಿ ನಿಗಾ ಇಡುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಆದೇಶ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.