ನವದೆಹಲಿ: ಜನವರಿ 18 ಮತ್ತು ಮಾರ್ಚ್ 23 ರ ನಡುವೆ ದೇಶವನ್ನು ಪ್ರವೇಶಿಸಿದ ಅಂತಾರಾಷ್ಟ್ರೀಯ ವಾಯು ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಕೂಡಲೇ ಬಲಪಡಿಸುವಂತೆ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ರಾಜ್ಯಗಳಿಗೆ ಸೂಚಿಸಿದ್ದಾರೆ.
ಕೊರೋನ ವೈರಸ್ ಸೋಂಕಿನ ಪರೀಕ್ಷೆಗೊಳಪಟ್ಟವರು ಮತ್ತು ವಿದೇಶದಿಂದ ಆಗಮಿಸಿದ ಪ್ರಯಾಣಿಕರ ನಡುವೆ ಸಾಕಷ್ಟು ಅಂತರವಿದೆ ಎಂದು ಅವರು ಹೇಳಿದ್ದಾರೆ.
ಎರಡು ತಿಂಗಳ ಅವಧಿಯಲ್ಲಿ ಸುಮಾರು 15 ಲಕ್ಷ ಮಂದಿ ವಿದೇಶದಿಂದ ಭಾರತಕ್ಕೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಗೌಬಾ, ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಕೋವಿಡ್ -19 ಗಾಗಿ ಮೇಲ್ವಿಚಾರಣೆ ಮಾಡಬೇಕು. ಪರೀಕ್ಷೆಗೊಳಪಟ್ಟವರು ಮತ್ತು ಭಾರತಕ್ಕೆ ಆಗಮಿಸಿದ ಅಂತರಾಷ್ಟ್ರೀಯ ಪ್ರಯಾಣಿಕರ ನಡುವಿನ ಅಂತರವು ವೈರಸ್ ವಿರುದ್ಧದ ಹೋರಾಟದಲ್ಲಿ ದೊಡ್ಡ ಹೊಡೆತ ನೀಡಬಹುದು ಎಂದು ಹೇಳಿದ್ದಾರೆ
ವಿದೇಶದಿಂದ ಆಗಮಿಸಿದ ಸಾಕಷ್ಟು ಮಂದಿ ಈಗಾಗಲೇ ಧನಾತ್ಮಕ ಪರೀಕ್ಷೆಗೆ ಒಳಪಟ್ಟಿದ್ದಾರೆ. ಹೀಗಾಗಿ 15 ಲಕ್ಷ ಮಂದಿಯನ್ನು ಪರೀಕ್ಷೆಗೊಳಪಡಿಸದೆ ಬಿಟ್ಟರೆ ದೊಡ್ಡ ಅಪಾಯ ಉಂಟಾಗಬಹುದು ಎಂದಿದ್ದಾರೆ.
“ನಿಮಗೆ ತಿಳಿದಿರುವಂತೆ, ನಾವು 2020 ರ ಜನವರಿ 18 ರಂದು ಜಾರಿಗೆ ಬರುವಂತೆ ವಿಮಾನ ನಿಲ್ದಾಣಗಳಿಂದ ಅಂತರರಾಷ್ಟ್ರೀಯವಾಗಿ ಒಳಬರುವ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ. 2020 ರ ಮಾರ್ಚ್ 23 ರವರೆಗೆ 15 ಲಕ್ಷ ಮಂದಿ ವಿದೇಶದಿಂದ ಭಾರತಕ್ಕೆ ಬಂದಿದ್ದಾರೆ ಎಂದು ವಲಸೆ ಬ್ಯೂರೋ ಹೇಳಿದೆ. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿದೇಶದಿಂದ ಬಂದವರನ್ನು ಮೇಲ್ವಿಚಾರಣೆ ಮಾಡುವುದು ಕಡ್ಡಾಯ ಎಂದಿದ್ದಾರೆ.
ಕಳೆದ ಎರಡು ತಿಂಗಳಿನಿಂದ ಭಾರತಕ್ಕೆ ಆಗಮಿಸಿದ್ದ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸರ್ಕಾರ ಮೇಲ್ವಿಚಾರಣೆ ಮಾಡಲು ಈಗಾಗಲೇ ಪ್ರಾರಂಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.