ನವದೆಹಲಿ: ಕೋವಿಡ್-19 ಮಹಾಮಾರಿಯ ಭಾರತದಲ್ಲಿ ಇನ್ನೂ ಸ್ಥಳೀಯ ಮಟ್ಟದಲ್ಲೇ ಇದೆ. ಸಮುದಾಯ ಪಸರಿಸುವಿಕೆಯನ್ನು ಕಂಡಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳ ಸಂಖ್ಯೆ 1,251ಕ್ಕೆ ಏರಿಕೆಯಾಗಿದೆ. ಇದರಲ್ಲಿ 49 ಮಂದಿ ವಿದೇಶಿ ಪ್ರಜೆಗಳು. ಈ ಪೈಕಿ ಈಗಾಗಲೇ 111 ರೋಗಿಗಳು ಗುಣಮುಖರಾಗಿದ್ದಾರೆ ಮತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 32 ಮಂದಿ ಸಾವಿಗೀಡಾಗಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, “ಕಳೆದ ಹನ್ನೆರಡು ದಿನಗಳಲ್ಲಿ ಭಾರತದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯು ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆಯಾಗಿದೆ. ದೇಶದ ಜನರ ಸಹಕಾರ, ನಮ್ಮ ಒಗ್ಗಟ್ಟಿನ ಕ್ರಿಯಾಶೀಲ ಕಾರ್ಯ, ಸಾಮಾಜಿಕ ಅಂತರ ಮತ್ತು ಲಾಕ್ಡೌನ್ ಹೇರಿಕೆ ಇದಕ್ಕೆ ಕಾರಣ ಎಂದು ಅವರು ಅಭಿಪ್ರಾಯಿಸಿದ್ದಾರೆ.
ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಹೀಗಾಗಿ ಜನರು ಈ ನಿಟ್ಟಿನಲ್ಲಿ ಜಾರಿಗೊಳಿಸಲಾದ ಎಲ್ಲಾ ನಿರ್ದೇಶನಗಳನ್ನು ಪಾಲನೆ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ವೈದ್ಯಕೀಯ ತುರ್ತು ನಿರ್ವಹಣೆ ಮತ್ತು ಆಸ್ಪತ್ರೆ ನಿರ್ವಹಣೆಗಾಗಿ ಸರಕಾರವು ಸಬಲೀಕೃತ ಗುಂಪುಗಳನ್ನು ರಚನೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಸಚಿವಾಲಯ ಕೂಡ ಐಸೋಲೇಶನ್ ಫೆಸಿಲಿಟಿಯನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೈನಿಂಗ್ ಅಂಡ್ ಹಾಸ್ಟೆಲ್ಸ್ನಲ್ಲಿ ಸ್ಥಾಪನೆ ಮಂಡಲ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್-19 ರೋಗಕ್ಕೆ ಸಮರ್ಪಿತ ಆಸ್ಪತ್ರೆಯನ್ನು ಸ್ಥಾಪನೆ ಮಾಡಲು ಮತ್ತು ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಕೇಂದ್ರ ಸರಕಾರವು ರಾಜ್ಯಗಳ ಸಹಕಾರದೊಂದಿಗೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ದಾಖಲಾದ ಧನಾತ್ಮಕ ಪ್ರಕರಣಗಳ ಪೈಕಿ ಶೇಕಡ 99 ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಮುದಾಯ ಹರಡುವಿಕೆಯ ಬಗ್ಗೆ ಇದುವರೆಗೂ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ, ಸ್ಥಳೀಯ ಹರಡುವಿಕೆಯ ಮಟ್ಟದಲ್ಲೇ ಇನ್ನೂ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.