ನವದೆಹಲಿ: ಕರೋನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪನೆ ಮಾಡಲಾಗಿದೆ. ಈ ನಿಧಿಗೆ ಪ್ರತಿಯೊಬ್ಬ ಕಾರ್ಯಕರ್ತರು 100 ರೂಪಾಯಿಗಳನ್ನು ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರ್ಯಕರ್ತರು 100 ರೂಪಾಯಿಗಳನ್ನು ಪಿಎಂ ಕೇರ್ಸ್ ನಿಧಿಗೆ ನೀಡಬೇಕು. ಮಾತ್ರವಲ್ಲದೆ, ಇತರ 10 ಮಂದಿಗೆ ದೇಣಿಗೆ ನೀಡುವಂತೆ ಪ್ರೋತ್ಸಾಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಜೆಪಿ ನಡ್ಡಾ ಅವರು ಮನವಿ ಮಾಡಿಕೊಂಡಿದ್ದಾರೆ.
ಕೊಡುಗೆ ನೀಡುವುದು ಈ ಸನ್ನಿವೇಶದ ಅಗತ್ಯತೆಯಾಗಿದ್ದು, ಪ್ರತಿಯೊಬ್ಬ ಕಾರ್ಯಕರ್ತರು ಕೂಡ ತಮ್ಮಿಂದಾದ ಸಹಾಯವನ್ನು ಮಾಡಬೇಕು ಎಂದು ಅವರು ಹೇಳಿದ್ದಾರೆ.
“ಪಿಎಂ ಕೇರ್ಸ್ ನಿಧಿಗೆ ಕೊಡುಗೆಯನ್ನು ನೀಡಿ ಎಂಬುದು ನಿಮ್ಮೆಲ್ಲರಲ್ಲಿ ನನ್ನ ಮನವಿಯಾಗಿದೆ. ನಮ್ಮ ಸಣ್ಣ ಸಹಾಯ ದೊಡ್ಡ ಕೊಡುಗೆಯನ್ನು ನೀಡಬಲ್ಲದು. ಕನಿಷ್ಠ ನೂರು ರೂಪಾಯಿಗಳನ್ನು ಪಿಎಂ ಕೇರ್ಸ್ ನಿಧಿಗೆ ನೀಡಿ ಮತ್ತು ಇತರ ಹತ್ತು ಮಂದಿಗೆ ಕೊಡುಗೆ ನೀಡಲು ಪ್ರೋತ್ಸಾಹಿಸಿ ಎಂದು ನಾನು ಪ್ರತಿಯೊಬ್ಬ ಕಾರ್ಯಕರ್ತರು ಮನವಿ ಮಾಡಿಕೊಳ್ಳುತ್ತೇನೆ” ಎಂದು ಜೆಪಿ ನಡ್ಡಾ ಟ್ವಿಟರ್ನಲ್ಲಿ ಹೇಳಿದ್ದಾರೆ.
मैं आप सभी से अपील करता हूँ कि #PMCaresFund मे अपना योगदान अवश्य दें।हमारा छोटा सा सहयोग बहुत बड़ा योगदान कर सकता है।मैं हर भाजपा कार्यकर्ता से यह निवेदन करता हूँ कि वह कम से कम 100 रु का योगदान पीएम केयर फंड में अवश्य करें और दस अन्य लोगों को भी योगदान करने के लिए प्रेरित करें। pic.twitter.com/xQHM0T0yTB
— Jagat Prakash Nadda (@JPNadda) March 30, 2020
ಪ್ರಧಾನಿ ನರೇಂದ್ರ ಮೋದಿಯವರು ಕರೋನವೈರಸ್ ವಿರುದ್ಧ ಹೋರಾಟ ನಡೆಸುವ ಸಲುವಾಗಿ, ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಸನ್ನಿವೇಶ ಪರಿಹಾರ ನಿಧಿಯನ್ನು ಸ್ಥಾಪನೆ ಮಾಡಿದ್ದಾರೆ. ಸಮಾಜದ ವಿವಿಧ ವರ್ಗಗಳ ಜನರು ಇದಕ್ಕೆ ಉದಾರ ಕೊಡುಗೆಗಳನ್ನು ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.