ನವದೆಹಲಿ: ಇಂದು ದೇಶದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಸ್ಮರಣಾರ್ಥ ಶ್ರೀರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ರಾಮನವಮಿಯ ಪಾವನ ಪರ್ವದಂದು ದೇಶದ ಜನರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಜೈ ಶ್ರೀರಾಮ್” ಎಂದಿದ್ದಾರೆ.
ಶ್ರೀರಾಮನ ಜನ್ಮದಿನವನ್ನು ರಾಮನವಮಿಯಾಗಿ ಆಚರಣೆ ಮಾಡಲಾಗುತ್ತದೆ. ವೈಷ್ಣವ ಪದ್ಧತಿಯಲ್ಲಿ ಶ್ರೀ ರಾಮನನ್ನು ವಿಷ್ಣುವಿನ ಏಳನೇ ಅವತಾರ ಎಂದು ಪರಿಗಣಿಸಲಾಗುತ್ತದೆ.
ಅಯೋಧ್ಯೆಯ ರಾಜ ದಶರಥ ಮತ್ತು ರಾಣಿ ಕೌಶಲ್ಯಳ ಪುತ್ರನಾಗಿ ಜನಿಸಿರುವ ಶ್ರೀರಾಮ ವಿಷ್ಣುವಿನ ಅವತಾರ. ಹಿಂದೂ ಕ್ಯಾಲೆಂಡರ್ ಪ್ರಕಾರ ಚೈತ್ರ ನವರಾತ್ರಿಯ ಒಂಬತ್ತನೇ ದಿನದಂದು ಶ್ರೀ ರಾಮನವಮಿಯನ್ನು ಆಚರಣೆ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.