ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ಹಬ್ಬಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತದಲ್ಲಿ ಈ ಸೋಂಕು ದೆಹಲಿಯ ನಿಜಾಮುದ್ದೀನ್ ಮಸೀದಿಗೆ ಧಾರ್ಮಿಕ ಸಭೆಗೆ ತೆರಳಿದ್ದವರಲ್ಲಿ ಅನೇಕ ಮಂದಿಗೂ ಈ ಸೋಂಕು ತಗುಲಿದೆ. ಸದ್ಯ ಈ ಸಭೆಯಲ್ಲಿ ಭಾಗವಹಿಸಿದವರನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಲು ಸರ್ಕಾರ, ಪೊಲೀಸರು ಮತ್ತು ವೈದ್ಯರು ಪ್ರಯತ್ನಿಸುತ್ತಿದ್ದರೆ, ಇತ್ತ ಬೆಂಗಳೂರಿನ ಸಾದಿಕ್ ನಗರದಲ್ಲಿ ಕೋವಿಡ್-19ನ ಕೆಲಸದಲ್ಲಿ ತೊಡಗಿದ್ದ ಆಶಾ ಕಾರ್ಯಕರ್ತೆಯ ಮೇಲೆ ದಾಳಿ ನಡೆಸಿ ಕೆಲವು ಪುಂಡರು ಪುಂಡಾಟಿಕೆ ಮೆರೆದಿದ್ದಾರೆ.
ನಿನ್ನೆ ಕೃಷ್ಣವೇಣಿ ಎಂಬ ಆಶಾ ಕಾರ್ಯಕರ್ತೆ ಬೆಂಗಳೂರಿನ ಸಾದಿಕ್ ನಗರದಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಕುರಿತು ಜಾಗೃತಿ ಮೂಡಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರು ಮನೆಯ ಮುಖ್ಯಸ್ಥರು ಮತ್ತು ಅವರ ದೂರವಾಣಿ ಸಂಖ್ಯೆಯ ವಿವರ ಪಡೆಯುತ್ತಿದ್ದರು. ಇದನ್ನು ಗಮನಿಸಿದ ನಂತರ ಮಸೀದಿಯ ಮೈಕ್ನಲ್ಲಿ ಯಾರೂ ವಿವರಗಳನ್ನು ನೀಡಬಾರದು ಎಂದು ಸೂಚನೆ ನೀಡಿದರು. ಆ ಬಳಿಕ ಕೆಲವು ಪುಂಡರು ವಿವರ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯಾದ ಕೃಷ್ಣವೇಣಿ ಅವರು ಬಳಿ ತೆರಳಿ ಅವರ ಬಳಿ ಇದ್ದ ಪೇಪರ್ಗಳನ್ನು ಹರಿದು, ಅವರಿಗೆ ಬೈಯ್ದು ಕಳಿಸಿದ್ದಾರೆ.
ಈ ವಿಷಯ ತಿಳಿದು ಆರೋಗ್ಯ ಸಚಿವರಾದ ಶ್ರೀರಾಮುಲು ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ನೀಡಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಾ. ಅಶ್ವಥ್ ನಾರಾಯಣ್ ಅವರು ಕೃಷ್ಣವೇಣಿ ಅವರು ಮನೆಗೆ ತೆರಳಿ ಸಾಂತ್ವನ ಹೇಳಿ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ನೀಡಿದ್ದಾರೆ.
ನಿಸ್ವಾರ್ಥ ಸೇವೆ ನೀಡುವ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಅತ್ಯಂತ ಅಮಾನವೀಯ ಮತ್ತು ಖಂಡನೀಯ.
ಹಲ್ಲೆಗೊಳಗಾದ ಕೃಷ್ಣವೇಣಿ ಅವರನ್ನು ಭೇಟಿಯಾಗಿ ಸಾಂತ್ವನ ನೀಡಿದ್ದೇನೆ. ಈ ಕೆಲಸದ ಹಿಂದೆ ಇರುವವರ ಮೇಲೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. pic.twitter.com/ioqU2gYSZv— Dr. Ashwathnarayan C. N. (@drashwathcn) April 2, 2020
ವಿಡಿಯೋವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿರುವ ಆರೋಗ್ಯ ಸಚಿವ ಶ್ರೀರಾಮುಲು ಹಲ್ಲೆ ನಡೆಸಿದ ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ದೆಹಲಿ ಮಸೀದಿಯಿಂದಲೂ ಕೊರೊನಾ ಹಬ್ಬಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ. ಇಲ್ಲಿ ಯಾವುದೇ ಒಂದು ಜಾತಿ, ಧರ್ಮ ಮುಖ್ಯವಲ್ಲ. ನಮಗೆ ಇಡೀ ದೇಶದ ಜನರ ಆರೋಗ್ಯ ಮುಖ್ಯ. ಈ ರೀತಿಯಲ್ಲಿ ಯಾರು ಕುಕೃತ್ಯಗಳನ್ನೂ ಎಸಗಿದ್ದಾರೆಯೋ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂಬುದಾಗಿಯೂ ಅವರು ಈ ಸಂದರ್ಭ ತಿಳಿಸಿದ್ದಾರೆ.
ಮನೆ ಬಾಗಿಲಿಗೆ ಬಂದು #Covid19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ!! pic.twitter.com/1pAJOEZCrE
— B Sriramulu (@sriramulubjp) April 2, 2020
ತಮ್ಮ ಜೀವದ ಆಸೆಯನ್ನು ತೊರೆದು ಆಶಾಕಾರ್ಯಕರ್ತೆಯರು, ನರ್ಸ್ಗಳು ಮನೆಮನೆಗೆ ತೆರಳಿ ಕೊರೋನಾ ಜಾಗೃತಿ ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ದೇವರಂತೆ. ಅವರಿಗೆ ಗೌರವ ನೀಡುವ ಕೆಲಸ ಮಾಡಿ. ಅದರ ಹೊರತಾಗಿ ಅವರ ಮೇಲೆ ಹಲ್ಲೆ ನಡೆಸಿದರೆ, ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಮುಲು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.