ನವದೆಹಲಿ: ಚೈನಾ ವೈರಸ್ ಕೊರೋನಾ ಸೋಂಕಿಗೆ ವಿಶ್ವವೇ ತತ್ತರಿಸುತ್ತಿದ್ದು, ಭಾರತವೂ ಸಂಪೂರ್ಣ ಲಾಕ್ ಡೌನ್ ಆಗಿದೆ. ವೈರಸ್ ಹರಡುವ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಹೀಗೆ ದೇಶಕ್ಕೆ ದೇಶವೇ ಬಂದ್ ಸ್ಥಿತಿಗೆ ತಲುಪಿರುವುದರಿಂದ ದೇಶದ ಅನೇಕ ಬಡ ನಾಗರಿಕರು ಪರದಾಡುವ ಸ್ಥಿತಿಯೂ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಿಂದ ಭಾರತೀಯರನ್ನು ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ನಲ್ಲಿಯೂ ಕೆಲವೊಂದು ಬದಲಾವಣೆಗಳನ್ನು ತರಲು ಸಿದ್ಧವಾಗಿದೆ. ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.
ಲಾಕ್ ಡೌನ್ನಿಂದ ಅಗತ್ಯ ವಸ್ತುಗಳು ಸಿಗದೆ ಬಡ ಜನರು ಕಷ್ಟಪಡುತ್ತಿದ್ದಾರೆ. ಮಹಿಳೆಯರು, ಹಾಲುಣಿಸುವ ತಾಯಂದಿರು, ಫಲಾನುಭವಿಗಳಿಗೆ ಬೇಕಾದ ಸೌಲಭ್ಯಗಳನ್ನು 15 ದಿನಗಳಿಗೊಮ್ಮೆ ಮನೆಬಾಗಿಲಿಗೆ ಒದಗಿಸುವುದು, ಕೃಷಿ ಉತ್ಪನ್ನಗಳ ನೇರ ಮಾರಾಟಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡುವುದು, ಆರೋಗ್ಯಕ್ಕೆ ಸಂಬಂಧಿಸಿದಂತೆ ಔಷಧ ತಯಾರಿಕೆಗೆ ಪೂರಕವಾಗುವಂತೆ ಈ ವಿನಾಯಿತಿಗಳನ್ನು ನೀಡುವಂತೆ ಅವರು ತಿಳಿಸಿದ್ದಾರೆ.
ಆದರೆ ನೈರ್ಮಲ್ಯ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಬೇಕಾದ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.