ನವದೆಹಲಿ: ನಿಜಾಮುದ್ದಿನ್ ತಬ್ಲೀಘಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಮಾರು 960 ವಿದೇಶಿಗರನ್ನು ಕೇಂದ್ರ ಗೃಹ ಸಚಿವಾಲಯವು ಕಪ್ಪು ಪಟ್ಟಿಗೆ ಸೇರಿಸಿದೆ. ಅವರ ಪ್ರವಾಸಿ ವೀಸಾವನ್ನು ರದ್ದುಪಡಿಸಲಾಗಿದೆ.
ಕರೋನವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶ ಲಾಕ್ ಡೌನ್ನಲ್ಲಿ ಇದ್ದರೂ ನಿಯಮಗಳನ್ನು ಉಲ್ಲಂಘಿಸಿ ಬೃಹತ್ ಪ್ರಮಾಣದಲ್ಲಿ ಸಭೆ ಸೇರಿದ್ದ ಕಾರಣಕ್ಕಾಗಿ ಇವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ.
ಇವರು ನಡೆಸಿದ ಸಮಾರಂಭದಿಂದಾಗಿ ಸಾಕಷ್ಟು ಪ್ರಮಾಣದ ಜನರಿಗೆ ಕರೋನ ಸೋಂಕು ತಗುಲಿದೆ. ಇದೀಗ ಇವರು ಸಂಪರ್ಕದಲ್ಲಿದ್ದ ಒಂಬತ್ತು ಸಾವಿರ ತಬ್ಲೀಘಿ ಜಮಾತ್ ಕಾರ್ಯಕರ್ತರನ್ನು ಪತ್ತೆಹಚ್ಚಿ ಕ್ವಾರಂಟೈನ್ನಲ್ಲಿ ಇಡುವ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಇವರು ಸಾಕಷ್ಟು ಪ್ರಮಾಣದ ಜನರಿಗೆ ಸೋಂಕು ಅನ್ನು ತಗುಲಿಸಿದ ಸಂಶಯಗಳು ವ್ಯಕ್ತವಾಗಿವೆ.
“ಸುಮಾರು 960 ವಿದೇಶಿಗರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಮತ್ತು ಅವರ ಭಾರತೀಯ ವೀಸಾವನ್ನು ರದ್ದುಪಡಿಸಲಾಗಿದೆ” ಎಂದು ಗೃಹ ಸಚಿವಾಲಯದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
गृह मंत्रालय द्वारा तब्लीगी जमात, निजामुद्दीन के मामले में दिल्ली पुलिस और अन्य सम्बंधित राज्यों के पुलिस महानिदेशकों को विदेशी अधिनियम,1946 एवं आपदा प्रबंधन अधिनियम,2005 के प्रावधानों का उल्लंघन करने के लिए 960 विदेशियों के विरुद्ध आवश्यक कानूनी कार्यवाई करने के निर्देश दिए हैं।
— गृहमंत्री कार्यालय, HMO India (@HMOIndia) April 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.