ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತ್ತೆ ನಾಲ್ಕು ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಮೂವರು ಸೋಂಕಿತರಿಗೆ ದೆಹಲಿಯ ನಿಜಾಮುದ್ದೀನ್ ಜಮಾತ್ನ ತಬ್ಲಿಘ್ನ ಸಂಪರ್ಕವಿದ್ದದ್ದು ದೃಢಪಟ್ಟಿದೆ. ಆ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128 ಕ್ಕೇರಿದೆ.
ಈ ಮೂವರು ತಬ್ಲಿಘ್ ಸೋಂಕಿತರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದೆರಡು ದಿನಗಳಲ್ಲಿ ರಾಜ್ಯದಲ್ಲಿ ವರದಿಯಾದ ಸೋಂಕಿತರ ಪೈಕಿ ಹನ್ನೊಂದು ಮಂದಿ ನಿಜಾಮುದ್ದೀನ್ ಜಮಾತ್ ಜೊತೆಗೆ ಸಂಪರ್ಕ ಹೊಂದಿದವರೇ ಆಗಿದ್ದು, ಇದು ಆತಂಕವನ್ನು ಸೃಷ್ಟಿಸಿದೆ.
ದೆಹಲಿಯ ತಬ್ಲಿಘ್ನಲ್ಲಿ ಭಾಗವಹಿಸಿದ ವ್ಯಕ್ತಿಗಳಲ್ಲಿ ಸ್ವಯಂ ಪ್ರೇರಿತರಾಗಿ ತಪಾಸಣೆಗೆ ಒಳಪಡುವಂತೆ ಈ ಹಿಂದೆಯೇ ಸರ್ಕಾರ ಸೂಚಿಸಿದ್ದರೂ, ಭಾಗವಹಿಸಿದ ಎಲ್ಲರೂ ಪತ್ತೆಯಾಗದೇ ಇರುವುದು ಈಗ ತಲೆನೋವಾಗಿ ಪರಿಣಮಿಸಿದೆ.
ಈ ಸೋಂಕಿತರಿಂದ ಇನ್ನಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆಗಳಿದ್ದು, ಆದಷ್ಟು ಸರ್ಕಾರ ನೀಡಿದ ಆದೇಶಗಳನ್ನು ಪಾಲಿಸಿ ಮನೆಯಲ್ಲಿಯೇ ಇದ್ದಲ್ಲಿ ಸೋಂಕು ವ್ಯಾಪಿಸುವ ತೀವ್ರತೆಯನ್ನು ತಡೆಯುವುದು ಸಾಧ್ಯವಾಗುತ್ತದೆ.
ಇನ್ನು ಈ ಕಾರ್ಯಕ್ರಮದಲ್ಲಿ ಕರ್ನಾಟಕದ 342 ಜನರು ಭಾಗಿಯಾದ ಬಗ್ಗೆ ಮಾಹಿತಿ ಇದೆ. ಅಲ್ಲದೆ ದೇಶ ವಿದೇಶಗಳಿಂದಲೂ ಅನೇಕರು ಇದರಲ್ಲಿ ಭಾಗವಹಿಸಿದ್ದು, ಭಾಗವಹಿಸಿದ ಭಾರತದ ಪ್ರಜೆಗಳ ವಿಸಾ ರದ್ದು ಮಾಡುವಂತೆಯೂ ಕೇಂದ್ರ ಗೃಹಸಚಿವಾಲಯ ಆದೇಶ ಹೊರಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.