ನವದೆಹಲಿ: ಈ ವಾರದ ಆರಂಭದಲ್ಲಿ ದೆಹಲಿಯ ತಬ್ಲೀಘಿ ಜಮಾತ್ ಕೇಂದ್ರ ಕಚೇರಿಯಲ್ಲಿ ಇದ್ದ ಕಾರ್ಯಕರ್ತರನ್ನು ಭದ್ರತಾ ಪಡೆಗಳು ಮತ್ತು ಆರೋಗ್ಯ ಕಾರ್ಯಕರ್ತರು ಕಷ್ಟಪಟ್ಟು ಬೇರೆಡೆ ಸ್ಥಳಾಂತರ ಮಾಡಿದ್ದರು. ಮತ್ತಷ್ಟು ವಿದೇಶಿ ಕಾರ್ಯಕರ್ತರು ದೆಹಲಿಯಲ್ಲಿರುವ ಬಗ್ಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದರು.
ಇದೀಗ ದೆಹಲಿಯ ವಿವಿಧ ಮಸೀದಿಗಳಲ್ಲಿ 800ಕ್ಕೂ ಅಧಿಕ ವಿದೇಶಿ ಜಮಾತ್ ಕಾರ್ಯಕರ್ತರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಇಂತಹ 16 ಮಸೀದಿಗಳನ್ನು ಈಗಾಗಲೇ ಪಟ್ಟಿಮಾಡಲಾಗಿದೆ. ಇಲ್ಲೇ ಅವಿತುಕೊಂಡಿದ್ದ ಅವರನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.
ಮಾರ್ಚ್ 1 ಮತ್ತು 18 ರ ನಡುವೆ ದೇಶಕ್ಕೆ ಸುಮಾರು 2100 ಮರ್ಕಜ್ ಕಾರ್ಯಕರ್ತರು ಆಗಮಿಸಿದ್ದರು ಎಂದು ಹೇಳಲಾಗಿದೆ.
ಸುಮಾರು 800 ಮಂದಿ ದೆಹಲಿಯ ಮಸೀದಿಗಳಲ್ಲಿ ಅಡಗಿ ಕುಳಿತುಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ದೆಹಲಿಯಲ್ಲಿ ಕರೋನವೈರಸ್ ಪೀಡಿತರ ಸಂಖ್ಯೆ 400 ಅನ್ನು ತಲುಪಿದೆ. ಇದರಲ್ಲಿ 259 ಮಂದಿ ಮರ್ಕಜ್ ಮಸೀದಿಗೆ ಸಂಬಂಧಿಸಿದವರಾಗಿದ್ದಾರೆ. 6 ರಲ್ಲಿ ೩ ಸಾವುಗಳು ಕೂಡ ಈ ಮಸೀದಿಗೆ ಸಂಬಂಧಿಸಿದವರೇ ಆಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.