ಜಿನೆವಾ: ಜಗತ್ತಿನಾದ್ಯಂತ ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಚೀನಾದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ UNHRCಗೆ ಇಂಟರ್ ನ್ಯಾಷನಲ್ ಕೌನ್ಸಿಲ್ ಆಫ್ ಜುರಿಸ್ಟ್ಸ್ (ಐಸಿಜೆ) ಮನವಿ ಮಾಡಿದೆ.
ಚೀನಾವು ಸಾಂಕ್ರಾಮಿಕ ರೋಗವನ್ನು ವಿಶ್ವದಲ್ಲೆಡೆ ಹರಡುವಂತೆ ಮಾಡಿ ಮನುಕುಲಕ್ಕೆ ದೊಡ್ಡ ಕಂದಕವನ್ನೇ ಸೃಷ್ಟಿಸಿದೆ. ಇದು ಚೀನಾ ಮಾಡಿದ ಮಹಾಪರಾಧ ಎಂದು ಸಿಜೆಐ ಹೇಳಿದೆ.
ಲಂಡನ್ ಮೂಲದ ಸಿಜೆಐ ಅಧ್ಯಕ್ಷ ಮತ್ತು ಆಲ್ ಇಂಡಿಯಾ ಬಾರ್ ಅಸೋಸಿಯೇಷನ್ ಮುಖ್ಯಸ್ಥರು ಆದೇಶ್ ಅಗರ್ವಾಲ್ ಅವರು ದೂರನ್ನು ನೀಡಿದ್ದು, ಚೀನಾ ಮಾಡಿದ ಅಪರಾಧಕ್ಕೆ ಬೆಲೆ ತರುವಂತೆ ಮಾಡಬೇಕು ಎಂದು ಅವರು ಯುಎನ್ಎಚ್ಆರ್ಸಿಯನ್ನು ಆಗ್ರಹಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದ ಜಗತ್ತಿಗೆ ಆದ ನಷ್ಟವನ್ನು ಚೀನಾವೇ ಸರಿದೂಗಿಸಬೇಕು ಎಂದು ಅವರು ಹೇಳಿದ್ದಾರೆ. ವಿಷಯದಲ್ಲಿ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.
ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಚೀನಾದ ಸರ್ಕಾರದ ವೈಫಲ್ಯವು ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿದೆ. ಭಾರತ ಮತ್ತು ಹಲವು ದೇಶಗಳಲ್ಲಿ ಕಾರ್ಮಿಕರಿಗೆ ದುಡಿಯಲು ಕೆಲಸವಿಲ್ಲದೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಮಾತ್ರವಲ್ಲದೆ ಚೀನಾವು ಸಾಂಕ್ರಾಮಿಕ ರೋಗವನ್ನು ನಿರ್ವಹಿಸಿದ ರೀತಿ ವಿಶ್ವಸಂಸ್ಥೆಯ ಹಲವು ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.