ಶ್ರೀನಗರ: ಕೊರೋನವೈರಸ್ ಸಾಂಕ್ರಾಮಿಕ ರೋಗ ಉದ್ಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಸಾವಿರಾರು ಜನರು ವಾಪಸ್ಸಾಗಿದ್ದರು. ಅವರು ಕಣಿವೆ ರಾಜ್ಯಕ್ಕೆ ಕಾಲಿಟ್ಟ ಕೂಡಲೇ ಅವರನ್ನು ಕ್ವಾರಂಟೈನ್ ಸೌಲಭ್ಯಕ್ಕೆ ಕಳುಹಿಸಲಾಗಿತ್ತು.
ಇದೀಗ ಅವರ 14 ದಿನಗಳ ಕ್ವಾರಂಟೈನ್ ಮುಕ್ತಾಯವಾಗಿದ್ದು, ಅವರನ್ನು ಅವರ ಮನೆಗಳಿಗೆ ವಾಪಸ್ ಕಳುಹಿಸಲಾಗಿದೆ.
ಜನರನ್ನು ಕ್ವಾರಂಟೈನ್ನಲ್ಲಿ ಇಡುವ ಸಲುವಾಗಿ ಶ್ರೀನಗರದಲ್ಲಿನ ಹಲವಾರು ಹೋಟೆಲುಗಳನ್ನು ಕ್ವಾರಂಟೈನ್ ಸೌಲಭ್ಯಗಳಾಗಿ ಪರಿವರ್ತನೆ ಮಾಡಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕ್ವಾರಂಟೈನ್ ಸೌಲಭ್ಯದಲ್ಲಿ ಇದ್ದ ಯುವತಿಯೊಬ್ಬಳು, ” ಮನೆಗೆ ಹಿಂದಿರುಗಿ ನಮ್ಮ ಕುಟುಂಬ ಸದಸ್ಯರನ್ನು ಭೇಟಿ ಆಗುತ್ತಿದ್ದೇವೆ ಎಂಬುದು ನಮಗೆ ಅತೀವ ಸಂತೋಷ ತಂದಿದೆ. ಕ್ವಾರಂಟೈನ್ ಪ್ರಕ್ರಿಯೆ ಅತ್ಯಂತ ಮುಖ್ಯವಾದುದು. ಯಾಕೆಂದರೆ ಈ ಪ್ರಕ್ರಿಯೆ ನಡೆಯದಿದ್ದರೆ ನಾವು ನಮ್ಮ ಕುಟುಂಬವನ್ನು ಅಪಾಯಕ್ಕೆ ದೂಡುತ್ತೇವೆ” ಎಂದಿದ್ದಾರೆ.
ಕ್ವಾರಂಟೈನ್ ಗೆ ಒಳಪಟ್ಟವರ ಬಹುತೇಕ ಮಂದಿ ವಿದ್ಯಾರ್ಥಿಗಳೇ ಇದ್ದರು. ಸೌಲಭ್ಯದಲ್ಲಿ ನೀಡಲಾದ ಎಲ್ಲಾ ಸವಲತ್ತುಗಳ ಬಗ್ಗೆ ಅವರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಸುಮಾರು 13 ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಇವರ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿತ್ತು. ಉತ್ತಮ ಆಹಾರ ಮತ್ತು ನೀರನ್ನು ನೀಡುವ ಏರ್ಪಾಟುಗಳನ್ನು ಮಾಡಲಾಗಿತ್ತು.
ಪ್ರಸ್ತುತ 500 ಮಂದಿಯನ್ನು ಕ್ವಾರಂಟೈನ್ ಸೌಲಭ್ಯದಿಂದ ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಸುಮಾರು 900 ಮಂದಿಯನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.