ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಸಹ ನಾಗರಿಕರೊಂದಿಗೆ ಸಹಕರಿಸಬೇಕು, ಸಾಮಾಜಿಕ ಅಂತರದ ನಿಯಮಗಳನ್ನು ಪಾಲನೆ ಮಾಡಬೇಕು ಮತ್ತು ವೈರಸ್ ಹರಡುವಿಕೆಯ ಆರೋಪ ತಮ್ಮ ಮೇಲೆ ಬಾರದಂತೆ ನೋಡಿಕೊಳ್ಳಬೇಕು ಎಂದು ಮುಸ್ಲಿಂ ಸಮುದಾಯದ ಜನರಿಗೆ ಸುಮಾರು 80 ಮುಸ್ಲಿಂ ಧರ್ಮೀಯ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ನವದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದ ಬಳಿಕ ದೇಶವ್ಯಾಪಿಯಾಗಿ ಸಾಂಕ್ರಮಿಕ ರೋಗದ ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಾ ಹೋಗಿದೆ. ಹೆಚ್ಚಿನ ತಬ್ಲಿಘಿಗಳಿಗೆ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆ. ಆದರೂ ಇವರುಗಳು ಆರೋಗ್ಯ ಕಾರ್ಯಕರ್ತರೊಂದಿಗೆ ಸರಿಯಾಗಿ ಸಹಕರಿಸುತ್ತಿಲ್ಲ. ವಿಕೃತವಾಗಿ ವರ್ತನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಇನ್ನೊಂದೆಡೆ ಆಶಾ ಕಾರ್ಯಕರ್ತರ ಮೇಲೆ ಮುಸ್ಲಿಂ ಸಮುದಾಯದ ಕೆಲವರು ಹಲ್ಲೆ ಮಾಡಿದ ಪ್ರಕರಣಗಳು ಕೂಡ ನಡೆದಿವೆ. ಇನ್ನು ಕೆಲವರು ಮುಸ್ಲಿಂ ಸಮಾಜದ ವ್ಯಕ್ತಿಗಳು, ವಿಡಿಯೋವನ್ನು ಮಾಡಿ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ಬೆಂಬಲಿಸುವಂತಹ ವರ್ತನೆಗಳನ್ನು ತೋರಿದ್ದಾರೆ. ಇದೆಲ್ಲವೂ ಮುಸ್ಲಿಂ ಸಮುದಾಯದ ಮೇಲೆ ಸಂಶಯವನ್ನು ವ್ಯಕ್ತಪಡಿಸುವಂತೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ಮತ್ತು ವೈರಸ್ ವಿರುದ್ಧದ ಹೋರಾಟದಲ್ಲಿ ಇತರರಿಗೆ ಮಾದರಿಯಾಗುವಂತೆ ನಡೆದುಕೊಳ್ಳಿ ಎಂದು ತಮ್ಮ ಸಮುದಾಯದ ಜನರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
“ಸಾರ್ವಜನಿಕ ಆರೋಗ್ಯ ತಜ್ಞರ ಸಲಹೆ ಸೂಚನೆಗಳನ್ನು ಪಾಲಿಸಿ ಮತ್ತು ಸರಕಾರದ ನಿಯಮಗಳನ್ನು ಅನುಸರಿಸಿ. ಧಾರ್ಮಿಕ ಗ್ರಂಥಗಳಲ್ಲಿ ಇದೆಯೋ ಅಥವಾ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಾವು ಸನ್ನಿವೇಶಕ್ಕೆ ಅಗತ್ಯವಾದುದನ್ನು ಪಾಲಿಸಬೇಕು” ಎಂದು ಅಧಿಕಾರಿಗಳು ತಮ್ಮ ಸಮುದಾಯದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.