ನವದೆಹಲಿ: ಕೊರೋನಾ ಕಾಟಕ್ಕೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇಂತಹ ಸಂದರ್ಭದಲ್ಲಿ ನಿರ್ಗತಿಕರು, ಬಡವರು, ಕೆಲಸಕ್ಕಾಗಿ ಬೇರೆ ಪ್ರದೇಶಗಳಿಂದ ಬಂದ ವಲಸೆ ಕಾರ್ಮಿಕರು ಆಹಾರ, ಆಶ್ರಯಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೂಗಲ್ ಮ್ಯಾಪ್ ಸಹ ಸರ್ಕಾರಕ್ಕೆ ಸಹಾಯ ಮಾಡಲು ಮುಂದಾಗಿದ್ದು, ಆಹಾರ ಮತ್ತು ಆಶ್ರಯಕ್ಕಾಗಿ ನಿರ್ಮಿಸಲಾಗಿರುವ ಕೇಂದ್ರಗಳನ್ನು ಇದು ಮ್ಯಾಪ್ನಲ್ಲಿ ತಿಳಿಸಲು ಮುಂದಾಗಿದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಗೂಗಲ್ ಇಂಡಿಯಾದ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಅನಲ್ ಘೋಷ್, ಈ ವರೆಗೆ 30 ಪ್ರದೇಶಗಳ ಮಾಹಿತಿಯನ್ನು ಗೂಗಲ್ ಮ್ಯಾಪ್ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಭಾರತದ ಇತರ ಭಾಷೆಗಳಲ್ಲಿಯೂ ಆಹಾರ ಮತ್ತು ಆಶ್ರಯ ತಾಣಗಳ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಕೊರೋನಾ ವಿರುದ್ಧ ಹೋರಾಟದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೊತೆಗೂ ಕೈ ಜೋಡಿಸಿರುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದಿ ಭಾಷೆಯಲ್ಲಿಯೂ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಗತ್ಯ ಸಮಯದಲ್ಲಿ ಜನರಿಗೆ ಸಹಾಯ ಮಾಡಲು ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿರುವ ಅವರು, ಸರ್ಕಾರ, ಸ್ವಯಂ ಸೇವಕರು, ಎನ್ಜಿಒಗಳು, ಸಂಚಾರ ಅಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯ ನಡೆಸುವುದಾಗಿ ತಿಳಿಸಿದ್ದಾರೆ. ಸ್ಮಾರ್ಟ್ ಫೋನ್ ಇಲ್ಲದವರಿಗೂ ಸುಲಭವಾಗಿ ಬಳಕೆಗೆ ಸಿಗುವಂತೆ ಇದನ್ನು ಅಭಿವೃದ್ಧಿ ಮಾಡಲಾಗಿದ್ದು, ಸಾರ್ವಜನಿಕ ಹಿತಕ್ಕಾಗಿ ಈ ಕ್ರಮವನ್ನು ಅಳವಡಿಸಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.