ಬೆಂಗಳೂರು: ಲಾಕ್ಡೌನ್ ಅನ್ನು ಹಿಂಪಡೆಯುವ ಬಗ್ಗೆ ಈಗಲೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ, ಈ ನಿರ್ಧಾರಕ್ಕೆ ಬರಲು ಇನ್ನಷ್ಟು ದಿನಗಳ ಅವಶ್ಯಕತೆ ಇದೆ ಎಂದು ಕರ್ನಾಟಕ ಸರಕಾರ ಹೇಳಿದೆ.
ಅಲ್ಲದೆ, ಕೊರೋನವೈರಸ್ ಹೆಚ್ಚಾಗಿರುವ ಹಾಟ್ಸ್ಪಾಟ್ಗಳಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸುವ ಬಗ್ಗೆ ಒಲವನ್ನು ಸರ್ಕಾರ ವ್ಯಕ್ತಪಡಿಸಿದೆ. ಕನಿಷ್ಠಪಕ್ಷ ಈ ಸ್ಥಳಗಳಲ್ಲಿ ಹೆಚ್ಚುವರಿಯಾಗಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.
“ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲು ನಮಗೆ ಇನ್ನಷ್ಟು ಸಮಯಗಳು ಬೇಕಾಗಿದೆ” ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೆ. ಅವರು ಹೇಳಿದ್ದಾರೆ.
ಏಪ್ರಿಲ್ 14 ರಂದು ರಾಷ್ಟ್ರವ್ಯಾಪಿ ಘೋಷಣೆ ಮಾಡಿರುವ ಲಾಕ್ ಡೌನ್ ಅಂತ್ಯವಾಗಲಿದೆ. ದೇಶದ ಹಲವಾರು ರಾಜ್ಯಗಳು ಇನ್ನಷ್ಟು ದಿನಗಳಕಾಲ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿವೆ.
ಏಪ್ರಿಲ್ 14 ರೊಳಗೆ ಸಾಂಕ್ರಾಮಿಕ ರೋಗದ ಸ್ಥಿತಿಗತಿ ಯಾವ ಮಟ್ಟದಲ್ಲಿ ಇದೆ ಎಂಬುದನ್ನು ಗಮನಿಸಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸುಧಾಕರ್ ಅವರು ಹೇಳಿದ್ದಾರೆ.
ಅಲ್ಲದೆ, ರೆಡ್ ಝೋನ್ ಪ್ರದೇಶಗಳಲ್ಲಿ ಲಾಕ್ ಡೌನ್ ಅನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸುವುದು ಒಳಿತು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.