ನವದೆಹಲಿ: ಕೊರೋನಾ ಲಾಕ್ಡೌನ್ನಿಂದ ಇಡೀ ದೇಶವೇ ಕಂಗೆಟ್ಟು ಹೋಗಿದೆ. ಬಡವರು ಅನ್ನ, ಆಹಾರಕ್ಕಾಗಿಯೂ ಪರಡಾಡುವ ಸ್ಥಿತಿ ಬಂದಿದ್ದು, ಅವರಿಗೆ ಅನ್ನ, ಆಹಾರ, ಪಡಿತರ ವಿತರಿಸುವ ಮೂಲಕ ವಿಶ್ವ ಹಿಂದೂ ಪರಿಷತ್ ನೊಂದವರ, ಅಶಕ್ತರ ಕಣ್ಣೀರೊರೆಸಲು ಮುಂದಾಗಿದೆ.
ಈ ವರೆಗೆ ದೇಶದ ಉದ್ದಗಲಕ್ಕೂ ಸುಮಾರು 2500 ಪ್ರದೇಶಗಳಲ್ಲಿ 7 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಆಹಾರ ಪೂರೈಕೆ ಮಾಡುವ ಮೂಲಕ ಮಾದರಿ ಕಾರ್ಯವನ್ನು ಮಾಡಿದೆ. ದೇಶದಾದ್ಯಂತ ಸೇವೆ ಒದಗಿಸುವ ನಿಟ್ಟಿನಲ್ಲಿ ತಂಡಗಳನ್ನೂ ರಚಿಸಿಕೊಂಡು ಕಾರ್ಯೋನ್ಮುಖವಾಗಿರುವ ವಿಹಿಂಪ ಆ ಮೂಲಕ ಅಸಹಾಯಕರ ಸೇವೆ ಮಾಡುತ್ತಿದೆ. ಈ ಕುರಿತಂತೆ ವಿಹಿಂಪದ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯನ್ನೂ ನೀಡಿದ್ದಾರೆ.
ಕೇಂದ್ರ, ರಾಜ್ಯ ಸರ್ಕಾರಗಳು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿವೆ. ಜೊತೆಗೆ ವಿಶ್ವ ಹಿಂದೂ ಪರಿಷತ್ ಸಹಾ ಹಲವು ರಾಜ್ಯಗಳಲ್ಲಿ ಬಡವರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವಲ್ಲಿ ಕೆಲಸ ಮಾಡುತ್ತಿದ್ದು, ಆ ಮೂಲಕ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕೊರೋನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡು ಸಂತ್ರಸ್ತರಿಗೆ ಸಹಾಯ ಮಾಡಲು ಮಾರ್ಚ್ 30 ರಂದು ಸಹಾಯವಾಣಿಯನ್ನು ಆರಂಭಿಸಿದ್ದ ಪರಿಷತ್, ಈ ವರೆಗೆ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಿದೆ. ಅಶಕ್ತರಿಗೆ ಆಹಾರ, ಹಾಲು, ಆರೋಗ್ಯ ರಕ್ಷಕರಿಗೆ ಪಿಪಿಇ ಸಾಧನಗಳು, ಮಕ್ಕಳಿಗೆ ಹಾಲು ಮೊದಲಾದ ಅಗತ್ಯ ಸಾಮಾಗ್ರಿಗಳನ್ನು ನೀಡುವ ಮೂಲಕ ಇತರ ಸಂಘಟನೆಗಳಿಗೂ ಮಾದರಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.