ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಅವರ ನಿವಾಸದಲ್ಲಿ ಇಂದು ಸಚಿವ ತಂಡದ ಸಭೆಯನ್ನು ನಡೆಸಲಾಯಿತು. ಲಾಕ್ ಡೌನ್ ನಂತರ ಸ್ಥಿತಿಗತಿಗಳ ಬಗ್ಗೆ ಅವಲೋಕಿಸುವ ಸಲುವಾಗಿ ಈ ಸಭೆಯನ್ನು ನಡೆಸಲಾಯಿತು.
ಏಪ್ರಿಲ್ 14 ರಿಂದ ದೇಶದಲ್ಲಿ ಲಾಕ್ ಡೌನ್ ಅನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಚರ್ಚೆಗಳು ನಡೆದವು. ವೈದ್ಯಕೀಯ ಪರಿಕರಗಳ ಖರೀದಿ ಕಾರ್ಯತಂತ್ರ ಮತ್ತು ಆಸ್ಪತ್ರೆಗಳ ಸಿದ್ಧತೆಗಳ ಬಗ್ಗೆಯೂ ಇಲ್ಲಿ ಪರಿಶೀಲನೆಗಳನ್ನು ನಡೆಸಲಾಯಿತು.
ಈ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್, ಸಚಿವರಾದ ಸ್ಮೃತಿ ಇರಾನಿ, ಪಿಯುಷ್ ಗೊಯಲ್, ಪ್ರಕಾಶ್ ಜಾವಡೇಕರ್, ರಾಮ್ ವಿಲಾಸ್ ಪಾಸ್ವಾನ್, ಸದಾನಂದ ಗೌಡ, ಮುಂತಾದವರು ಭಾಗವಹಿಸಿದ್ದರು. ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಕೂಡ ಅವರು ಇಲ್ಲಿ ಉಪಸ್ಥಿತರಿದ್ದರು.
ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಇಂದಿನವರೆಗೆ ಸದ್ಯದ ಪರಿಸ್ಥಿತಿಗಳ ಬಗ್ಗೆ ಸಭೆಯಲ್ಲಿ ಅವಲೋಕನವನ್ನು ನಡೆಸಲಾಯಿತು. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿ ಮಾಹಿತಿ ನೀಡಿರುವ ರಾಜನಾಥ್ ಸಿಂಗ್ ಅವರು, “ಸಂಸದರ ವೇತನವನ್ನು ಶೇಕಡ 30ರಷ್ಟು ಕಡಿತಗೊಳಿಸಿದರ ಕುರಿತು ಸಚಿವರ ತಂಡದಿಂದ ಶ್ಲಾಘನೆಗಳು ವ್ಯಕ್ತವಾಯಿತು” ಎಂದಿದ್ದಾರೆ. ಈ ಹಣವನ್ನು ಕೊರೋನವೈರಸ್ ವಿರುದ್ಧದ ಹೋರಾಟಕ್ಕೆ ಬಳಸಲಾಗುವುದು ಎಂದು ಅವರು ಭರವಸೆ ನೀಡಿದರು.
ಸಭೆಯಲ್ಲಿ ಸಚಿವರುಗಳು ಸಮಸ್ಯೆಯನ್ನು ಎದುರಿಸಲು ಮಾಡಬಹುದಾದ ಕ್ರಮಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.