ನವದೆಹಲಿ: ಕೊರೋನಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರೀ ಸದ್ದು ಮಾಡಿದ್ದ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ದೆಹಲಿಯ ಅಗ್ನಿಶಾಮಕ ದಳ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ಗಳು ಜಂಟಿಯಾಗಿ ಸ್ಯಾನಿಟೈಸೇಶನ್ ಡ್ರೈವ್ ನಡೆಸುವ ಮೂಲಕ ನೈರ್ಮಲ್ಯಕ್ಕೆ ಮುಂದಾಗಿದೆ.
ಭಾರತದಾದ್ಯಂತ ಅನೇಕ ಮಂದಿ ಕೊರೋನಾ ಸೋಂಕಿತರಿಗೆ ಈ ಮರ್ಕಜ್ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ ಕಾರ್ಯಕ್ರಮದ ನಂಟಿರುವುದು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ.
ದೆಹಲಿಯಲ್ಲಿ ಪತ್ತೆಯಾದ 500ಕ್ಕೂ ಹೆಚ್ಚಿನ ಸೋಂಕಿತರಲ್ಲಿ ಸುಮಾರು 300 ಮಂದಿಗೆ ಈ ಜಮಾತ್ನ ಕಾರ್ಯಕ್ರಮದ ನಂಟಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಳಿಸಿದ್ದಾರೆ. ಈ ಕಾರಣದಿಂದಲೇ ಇದೀಗ ನಿಜಾಮುದ್ದೀನ್ ಪ್ರದೇಶದಲ್ಲಿ ಸೋಂಕು ಹೆಚ್ಚು ವ್ಯಾಪಕವಾಗಿ ಹರಡದಂತೆ ಸ್ಯಾನಿಟೈಸೇಶನ್ ಡ್ರೈವ್ ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.