ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ಧವಾಗಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ಗೆ ಐಸಿಎಂಆರ್ ಅನುಮತಿ ನೀಡಿದ್ದು, ಇಂದಿನಿಂದ ಕಾರ್ಯಾರಂಭಗೊಂಡಿದೆ. ಆ ಮೂಲಕ ವೆನ್ಲಾಕ್ನ ಕೋವಿಡ್ ಟೆಸ್ಟಿಂಗ್ ಬ್ಲಾಕ್ ಇದೀಗ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದೆ.
ವೆನ್ಲಾಕ್ನ ಕೃತಕ ಆವಯವ ಕೇಂದ್ರದ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಅನ್ನು ಕೊರೋನಾ ಚಿಕಿತ್ಸೆಗೆ ಬೇಕಾದ ಸುಸಜ್ಜಿತ ಕೇಂದ್ರವಾಗಿ ಪರಿವರ್ತಿಸಿದ್ದು ಇದು ಸುಮಾರು 79 ಹಾಸಿಗೆಗಳನ್ನು ಹೊಂದಿದೆ. ಇಲ್ಲಿ ಸೋಂಕಿತರ ಗಂಟಲು ದ್ರವ ಪರೀಕ್ಷೆಯಿಂದ ಹಿಡಿದು, ಸೋಂಕಿತರಿಗೆ ಬೇಕಾದ ಅಗತ್ಯ ಚಿಕಿತ್ಸಾ ಸೌಕರ್ಯಗಳು, ವೈದ್ಯಕೀಯ ಸಿಬ್ಬಂದಿಗಳಿಗೆ ಬೇಕಾದ ಅಗತ್ಯ ವೈದ್ಯಕೀಯ ಸಾಮಗ್ರಿಗಳು, ಉಡುಪುಗಳು ಎಲ್ಲ ವ್ಯವಸ್ಥೆಗಳನ್ನೂ ಮಾಡಲಾಗಿದೆ.
ಈ ಬ್ಲಾಕ್ನ ಮೂರನೇ ಮಹಡಿಯನ್ನು ಸಂಪೂರ್ಣವಾಗಿ ಶಂಕಿತ ರೋಗಿಗಳಿಗಾಗಿ ಮೀಸಲಿಡಲಾಗಿದ್ದು, 1 ನೇ ಮಹಡಿಯನ್ನು ಚಿಂತಾಜನಕ ಸ್ಥಿತಿಯಲ್ಲಿರುವ ರೋಗಿಗಳ ಆರೈಕೆಗಾಗಿ ಬಳಕೆ ಮಾಡಲಾಗುತ್ತಿದೆ. ಅಲ್ಲಿ 49 ಹಾಸಿಗೆಗಳ ವ್ಯವಸ್ಥೆ ಇದೆ. ಇನ್ನು ಎರಡು ಮತ್ತು ಮೂರನೇ ಮಹಡಿಗೆ ತೆರಳಲು ಪ್ರತ್ಯೇಕ ಲಿಫ್ಟ್ ವ್ಯವಸ್ಥೆಯನ್ನು ಸಹಾ ಮಾಡಲಾಗಿದೆ. ಇನ್ನು 2 ನೇ ಮಹಡಿಯಲ್ಲಿ ಕೊರೋನಾ ಪಾಸಿಟಿವ್ ಬಂದ ರೋಗಿಗಳಿಗೆ ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ.
ಈ ಕೇಂದ್ರ ಆರಂಭಕ್ಕೂ ಮುನ್ನ ರೋಗಿಗಳ ಗಂಟಲು ದ್ರವ ಪರೀಕ್ಷೆಗಾಗಿ ಬೆಂಗಳೂರು ಅಥವಾ ಹಾಸನಕ್ಕೆ ಕಳುಹಿಸಬೇಕಾಗಿತ್ತು. ಈ ಹಿಂದೆ ಕೋವಿಡ್-19 ಕುರಿತಂತೆ ನಡೆದ ಸಭೆಯಲ್ಲಿ ಮಂಗಳೂರಿನಲ್ಲಿಯೂ ಟೆಸ್ಟಿಂಗ್ ಸೆಂಟರ್ ತೆರೆಯುವಂತೆ ಭಾಗವಹಿಸಿದ್ದ ಆರೋಗ್ಯ ಸಚಿವ ಶ್ರೀ ರಾಮುಲು ಅವರ ಗಮನಕ್ಕೂ ತರಲಾಗಿತ್ತು. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಮುತುವರ್ಜಿಯಿಂದ ಮಂಗಳೂರಿನಲ್ಲಿಯೂ ಸೆಂಟರ್ ಆರಂಭವಾಗಿದೆ.
ಈ ಕುರಿತು ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅಲ್ಲಿನ ಫೋಟೋಗಳನ್ನು ಹಂಚಿಕೊಂಡಿದ್ದು, ಟೆಸ್ಟಿಂಗ್ ಲ್ಯಾಬ್ ಇಂದಿನಿಂದ ಕಾರ್ಯಾರಂಭಿಸಲಿದೆ. ತುರ್ತು ಸ್ಪಂದಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳುʼ ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳೂರು ವೆನ್ಲಾಕ್ ನಲ್ಲಿ #ICMR, #NIV ಒಪ್ಪಿಗೆ ಪಡೆದು, #covid19 ಪರೀಕ್ಷಿಸಿ, ಕೆಲವೇ ಗಂಟೆಗಳಲ್ಲಿ ವರದಿ ನೀಡುವ Virology Research and Diagnostic Laboratory ಇಂದಿನಿಂದ ಕಾರ್ಯಾರಂಬಿಸಲಿದೆ. ಇದರಿಂದ ಶಂಕಿತರ ಪರೀಕ್ಷೆಗೆ ಹೊರಜಿಲ್ಲೆಯ ಅವಲಂಬನೆ ನಿಲ್ಲಲಿದೆ. ತುರ್ತು ಸ್ಪಂದಿಸಿದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. pic.twitter.com/qC6cSc8EBD
— Kota Shrinivas Poojari (@KotasBJP) April 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.