ನವದೆಹಲಿ: ಇಂದು ಹನುಮಾನ್ ಜಯಂತಿಯ ಪಾವನ ದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರು ದೇಶದ ನಾಗರಿಕರಿಗೆ ಹನುಮಾನ್ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.
ಜೀವನದ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಮೋದಿ ಪ್ರಾರ್ಥಿಸಿದ್ದಾರೆ.
ಚೈತ್ರಮಾಸದ ಹುಣ್ಣಿಮೆಯ ದಿನದಂದು ರಾಮನ ಪರಮಭಕ್ತ ಹನುಮಾನ್ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ.
ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಹನುಮಾನ್ ಜಯಂತಿಯ ಪಾವನ ದಿನದಂದು ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು. ಭಕ್ತಿ, ಶಕ್ತಿ, ಸಮರ್ಪಣೆ ಮತ್ತು ಶಿಸ್ತಿನ ಪ್ರತೀಕನಾದ ಪವನಪುತ್ರನ ಜೀವನ ನಮಗೆ ಪ್ರತಿ ಸಂಕಟವನ್ನು ಎದುರಿಸಲು, ಅದನ್ನು ಮೆಟ್ಟಿ ನಿಲ್ಲಲು ಪ್ರೇರಣೆಯನ್ನು ನೀಡುತ್ತದೆ” ಎಂದಿದ್ದಾರೆ.
हनुमान जयंती के पावन अवसर पर देशवासियों को हार्दिक शुभकामनाएं। भक्ति, शक्ति, समर्पण और अनुशासन के प्रतीक पवनपुत्र का जीवन हमें हर संकट का सामना करने और उससे पार पाने की प्रेरणा देता है।
— Narendra Modi (@narendramodi) April 8, 2020
ಹನುಮಾನ್ ಜಯಂತಿಯ ಅಂಗವಾಗಿ ಪ್ರತಿವರ್ಷ ಸಡಗರ-ಸಂಭ್ರಮದಿಂದ ಜನರು ಹಬ್ಬವನ್ನು ಆಚರಣೆ ಮಾಡುತ್ತಾರೆ. ಆದರೆ ಈ ಬಾರಿ ಮಹಾಮಾರಿ ಕರೋನವೈರಸ್ ಕಾರಣದಿಂದಾಗಿ ಜನರು ತಮ್ಮ ಮನೆಯಲ್ಲಿಯೇ ಹನುಮಾನ್ ಜಯಂತಿಯನ್ನು ಆಚರಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.