ಬೆಂಗಳೂರು: ಕೊರೋನಾ ವಿಚಾರದಲ್ಲಿ ದೆಹಲಿ ನಿಜಾಮುದ್ದೀನ್ ಮರ್ಕಜ್ನ ತಬ್ಲಿಘಿ ಸಭೆ ಎಂದ ಕೂಡಲೇ ಇಡೀ ದೇಶಕ್ಕೆ ದೇಶವೇ ಬೆಚ್ಚಿ ಬೀಳುತ್ತದೆ. ಕಾರಣ ದೇಶಾದ್ಯಂತ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿರುವುದು ತಬ್ಲಿಘಿಗಳಲ್ಲೇ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ರಾಜ್ಯದಿಂದ ಸುಮಾರು 1300 ಮಃದಿ ಈ ಜಮಾತ್ನಲ್ಲಿ ಪಾಲ್ಗೊಂಡಿದ್ದು , ಈ ವರೆಗೆ ಕೇವಲ 758 ಜನರನ್ನು ಪತ್ತೆಹಚ್ಚಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಇನ್ನುಳಿದವರನ್ನು ಪತ್ತೆಹಚ್ಚಲು ಸರ್ಕಾರ ನಾನಾ ತರದಲ್ಲಿ ಪ್ರಯತ್ನಿಸುತ್ತಿದ್ದರೂ ಅವರು ಮಾತ್ರ ಸರ್ಕಾರದ ಯಾವುದೇ ಮಾತಿಗೂ ತಲೆ ಕೆಡಿಸಿಕೊಂಡಂತಿಲ್ಲ.
ಈ ವರೆಗೆ ತಪಾಸಣೆಗೆ ಒಳಪಡಿಸಲಾದ ತಬ್ಲಿಘಿಗಳ ಪೈಕಿ 30 ಮಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಉಳಿದವರಲ್ಲಿ ಸೋಂಕು ಪತ್ತೆಯಾಗಿಲ್ಲ ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇನ್ನುಳಿದ ಸಭೆಯಲ್ಲಿ ಪಾಲ್ಗೊಂಡವರಲ್ಲಿ ತಪಾಸಣೆಗೆ ಒಳಗಾಗುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಅವರ ಪತ್ತೆಗೂ ಕ್ರಮ ಕೈಗೊಂಡಿರುವ ಬಗ್ಗೆ ಮುಖ್ಯಮಂತ್ರಿ ಸರಣಿ ಟ್ವೀಟ್ಗಳ ಮೂಲಕ ಮಾಹಿತಿ ನೀಡಿದ್ದಾರೆ.
ದೇಶ ವಿದೇಶಗಳಿಂದಲೂ ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಯಾತ್ರೆಯ ಮಧ್ಯೆ ಇತರರಿಗೂ ಸೋಂಕು ಹರಡಿರುವ ಎಲ್ಲಾ ಸಾಧ್ಯತೆಗಳೂ ಇವೆ. ಇನ್ನು ಈ ಸಭೆಯಲ್ಲಿ ಭಾಗವಹಿಸಿದ್ದ ವಿದೇಶಿ ಪ್ರಜೆಗಳೂ ರಾಜ್ಯಕ್ಕೆ ಬಂದಿದ್ದು, ಅವರನ್ನು ಬೆಳಗಾವಿ, ಬೀದರ್ ಮೊದಲಾದೆಡೆ ಬಂಧಿಸಲಾಗಿದೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ವೀಸಾಗಳನ್ನು ರದ್ದು ಪಡಿಸಲಾಗಿರುವ ಕುರಿತೂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಉಳಿದ ತಬ್ಲಿಘಿಗಳನ್ನು ಶೀಘ್ರ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದ್ದು, ಜನ ಸಾಮಾನ್ಯರು ಭಯ ಪಡದಂತೆಯೂ ಮುಖ್ಯಮಂತ್ರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.