ಮುಂಬೈ: ದೇಶಾದ್ಯಂತ ಲಾಕ್ಡೌನ್ ಕಾನೂನು ಜಾರಿಯಲ್ಲಿದೆ. ಇಂತಹ ಕಠಿಣ ಸ್ಥಿತಿಯಲ್ಲಿ ಅಗತ್ಯ ವೈದ್ಯಕೀಯ ಸೇವೆಯನ್ನು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಾಗಾಟ ನಡೆಸುವ ಕಾರ್ಯವನ್ನು ಭಾರತೀಯ ವಾಯು ಪಡೆ ಮಾಡುತ್ತಿದ್ದು, ‘ಹರ್ ಕಾಮ್ ದೇಶ್ ಕೆ ನಾಮ್’ ಎಂಬ ಧ್ಯೇಯದೊಂದಿಗೆ ಮಾಡುತ್ತಿದೆ.
ಕರ್ನಾಟಕಕ್ಕೆ ಅಗತ್ಯವಿರುವ ವೈದ್ಯಕೀಯ ಸಾಮಗ್ರಿಗಳನ್ನು ಸಿದ್ಧಪಡಿಸಲು ಮುಂಬೈನಿಂದ ಭಾರತೀಯ ವಾಯುಪಡೆಯ ವಿಮಾನಗಳು ಕಚ್ಚಾ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಕೋವಿಡ್-19 ವಿರುದ್ಧದ ಯುದ್ಧದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕರ್ನಾಟಕದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಬೇಕಾದ ಅಗತ್ಯ ಪಿಪಿಇಗಳನ್ನು ಸಿದ್ಧಪಡಿಸಿಕೊಳ್ಳುವುದಕ್ಕಾಗಿ ಅಗತ್ಯ ವಸ್ತುಗಳನ್ನು ಐಎಎಫ್ ವಿಮಾನಗಳು ಹೊತ್ತು ತಂದಿವೆ. ಎ. 8 ರಂದು ಸುಮಾರು 3.0 ಟನ್ ಗಳಷ್ಟು ಅಗತ್ಯ ವಸ್ತುಗಳನ್ನು ವಾಯುಪಡೆ ಸರಬರಾಜು ಮಾಡಿದ್ದು, ಆರೋಗ್ಯ ರಕ್ಷಕಗಳನ್ನು ತಲುಪಿಸುವ ಮೂಲಕ ದೇಶದ ವಾಯುಪಡೆ ಪ್ರಶಂಸೆಗೆ ಪಾತ್ರವಾಗಿದೆ.
ಈವರೆಗೂ ಕೊರೋನಾಗೆ ದೇಶದೆಲ್ಲೆಡೆ 6700ಕ್ಕೂ ಹೆಚ್ಚು ಮಂದಿ ತುತ್ತಾಗಿದ್ದು, 160ಕ್ಕೂ ಹೆಚ್ಚು ಸಾವು ಸಂಭವಿಸಿದೆ. 460 ಕ್ಕೂ ಅಧಿಕ ಜನರು ಗುಣಮುಖರಾಗಿರುವ ಬಗ್ಗೆ ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.