ನವದೆಹಲಿ: ಕೋವಿಡ್ -19 ಪರಿಸ್ಥಿತಿಯನ್ನು ನಿಭಾಯಿಸಲು ಹನ್ನೊಂದು ಎಂಪವರ್ಡ್ ಗ್ರೂಪ್ಗಳು ನಡೆಸಿದ ಪ್ರಯತ್ನಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಶುಕ್ರವಾರ ಪ್ರಧಾನ ಮಂತ್ರಿ ಕಾರ್ಯಾಲಯ ಪರಿಶೀಲನಾ ಸಭೆಯನ್ನು ನಡೆಸಿತು.
ಸಭೆಯನ್ನು ನಡೆಸಿದ ಪ್ರಧಾನ ಮಂತ್ರಿ ಕಛೇರಿಯ ಮುಖ್ಯ ಕಾರ್ಯದರ್ಶಿ ಗಳು ಕೊರೋನಾ ನಿಯಂತ್ರಣಕ್ಕಾಗಿ ಈ ಎಂಪವರ್ಡ್ ಗುಂಪುಗಳು ಕೈಗೊಳ್ಳುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಡೆಸಿದ ಅತ್ಯಂತ ಮಹತ್ವದ ಸಭೆ ಇದಾಗಿದ್ದು, ರೋಗ ನಿಯಂತ್ರಣ ಅಥವಾ ಸೋಂಕು ತಡೆಗಟ್ಟಲು ತೆಗೆದುಕೊಳ್ಳಬಹುದಾದ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಕಛೇರಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಅಗತ್ಯ ವಸ್ತುಗಳ ಲಭ್ಯತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಅಗತ್ಯ ಕ್ರಮಗಳು, ರೈತರ ಸಮಸ್ಯೆಗಳ ನಿವಾರಣೆಗೆ ತೆಗೆದುಕೊಳ್ಳಲಾದ ಕ್ರಮ ಮೊದಲಾದ ವಿಚಾರಗಳ ಮೇಲೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಜೊತೆಗೆ ನಿರ್ಗತಿಕರಿಗೆ ವಸತಿ ಕಲ್ಪಿಸುವ ಬಗ್ಗೆಯೂ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಸಭೆಯಲ್ಲಿ ತಿಳಿಸಲಾಯಿತು.
ಅಗತ್ಯ ಪಿಪಿಇ ವಸ್ತುಗಳ ತಯಾರಿ, ಜಿಲ್ಲಾ ಮತ್ತು ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ ಕ್ರಮಗಳ ಬಗ್ಗೆ ಆಗಾಗ್ಗೆ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ. ಸ್ಥಳೀಯ ಸಂಸ್ಥೆಗಳು, ಎನ್ಜಿಒಗಳನ್ನು ಜೊತೆಗೂಡಿಸಿಕೊಂಡು ಇಂತಹ ಕಠಿಣ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುವಂತೆಯೂ ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ಅಲ್ಲದೆ ಪಿಎಂ ಗರೀಬ್ ಕಲ್ಯಾಣ್ ಯೋಜನೆಯ ಆರ್ಥಿಕ ಪರಿಹಾರ ನೇರವಾಗಿ ಫಲಾನುಭವಿಗಳಿಗೆ ಸಿಗುತ್ತಿದೆಯೇ ಎಂಬುದರ ಬಗ್ಗೆಯೂ ಗಮನ ಹರಿಸಲಾಯಿತು. ಈ ಕುರಿತಾಗಿ ಸೂಕ್ಷ್ಮವಾಗಿ ಗಮನಿಸುವಂತೆಯೂ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅಲ್ಲದೆ ಕೋವಿಡ್-19 ತಡೆಗೆ ಅಭಿವೃದ್ಧಿ ಮಾಡಲಾದ ತಂತ್ರಜ್ಞಾನಗಳ ಸಮರ್ಪಕ ಬಳಕೆಯ ಕೂರಿತಾಗಿಯೂ ಮುಖ್ಯ ಕಾರ್ಯದರ್ಶಿಗಳು ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಮತ್ತು ಇತರ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.