ಆಗ್ರಾ: ದೇಶ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದು ಕೇಂದ್ರ ಸರ್ಕಾರ ಲಾಕ್ಡೌನ್ ನಿಯಮವನ್ನು ಜಾರಿಗೊಳಿಸಿದೆ. ಆ ಮೂಲಕ ಜನರು ಮನೆಯಲ್ಲಿಯೇ ಕುಳಿತು ಸೋಂಕಿಗೆ ತುತ್ತಾಗದಂತೆ ಮತ್ತು ಸೋಂಕು ಹರಡದಂತೆ ಕಠಿಣ ಕ್ರಮ ಜಾರಿಗೊಳಿಸಿದೆ. ಇನ್ನು ಒಂದೆಡೆಯಲ್ಲಿ ಆರೋಗ್ಯ ರಕ್ಷಕರಾದ ವೈದ್ಯಕೀಯ ಸಿಬ್ಬಂದಿ ಸೋಂಕಿತರ ಚಿಕಿತ್ಸೆಗೆ ಹರಸಾಹಸ ಪಡುತ್ತಿದ್ದರೆ, ಇನ್ನೊಂದೆಡೆ ಪೊಲೀಸರು ಜನರನ್ನು ರಸ್ತೆಗಿಳಿಯದಂತೆ ನೋಡಿಕೊಳ್ಳುವಲ್ಲಿ ಹೆಣಗಾಡುತ್ತಿದ್ದಾರೆ.
ತಮ್ಮ ಮನೆಯವರ ಜೊತೆಗೆ ಈ ಲಾಕ್ಡೌನ್ ಸಂದರ್ಭದಲ್ಲಿಯೂ ಕಾಲ ಕಳೆಯಲಾಗದ ಪೊಲೀಸರು, ತಮಗೆ ಸೋಂಕು ಹರಡುವ ಭಯವಿದ್ದರೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿಸಿಲು, ಮಳೆ, ಗಾಳಿ ಎನ್ನದೆ ಅನ್ನ ಆಹಾರವಿಲ್ಲದೆಯೂ ಜನರನ್ನು ಸೋಂಕಿನಿಂದ ರಕ್ಷಿಸಲು ಪ್ರಯತ್ನ ಮಾಡುತ್ತಾರೆ. ಹೀಗೆ ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಪೊಲೀಸರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಜನರು ಕರ್ತವ್ಯ ನಿರತ ಪೊಲೀಸರ ಮೇಲೆ ಹೂಮಳೆ ಸುರಿಸುವುದು, ದೇಶ ಭಕ್ತಿಗೀತೆಗಳನ್ನು ಹಾಡುವ ಮೂಲಕ ನಮನ ಸಲ್ಲಿಸುವ ಕೆಲಸ ಮಾಡುತ್ತಿದ್ದಾರೆ.
ಇಂತಹ ವಿಡಿಯೋವನ್ನು ಇದೀಗ ಆಗ್ರಾದ ಪೊಲೀಸರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಜನರು ಪೊಲೀಸರಿಗೆ ಸಲ್ಲಿಸುತ್ತಿರುವ ಈ ಗೌರವ ಅವರ ನಿಸ್ವಾರ್ಥ ಸೇವೆಗೆ ದಕ್ಕಿದ ಪ್ರತಿಫಲವೇ ಸರಿ. ಅನಿವಾರ್ಯ ಸಂದರ್ಭದಲ್ಲಿ ದೇಶದ ಜನರ ರಕ್ಷಣೆಯ ಜೊತೆಗೆ, ಅವರಿಗೆ ಬೇಕಾದ ಅಗತ್ಯ ಆಹಾರ ಸಾಮಗ್ರಿಗಳನ್ನು ಒದಗಿಸುವ ಕಾರ್ಯ ಮಾಡುತ್ತಿರುವ ಪೊಲೀಸರು ನಿಜಕ್ಕೂ ಅಭಿನಂದನಾರ್ಹರೇ ಸರಿ.
जब भी आईं विषम परिस्थित,घनघोर अंधेरा छा जाता है,
फिर एक फरिश्ता आता है और पथ पथिक दर्शाता है।आज कल, #AgraPolice को जनता इसी रूप में देख रही है,#कोरोना से लड़ने के लिए जवानों ने दिन-रात एक कर दिए, जनता ने देशभक्ति की भावना के साथ, #शमसाबाद_पुलिस का कुछ इस तरह स्वागत किया। pic.twitter.com/JioAAbZpev
— AGRA POLICE (@agrapolice) April 10, 2020
ಈ ವರೆಗೆ ಭಾರತದಲ್ಲಿ ಸುಮಾರು 7000 ಕ್ಕೂ ಹೆಚ್ಚು ಜನ ಕೊರೋನಾ ಸೋಂಕಿತರಾಗಿದ್ದು, 200 ಕ್ಕೂ ಹೆಚ್ಚು ಸಾವು ಸಂಭವಿಸಿದೆ. 500 ರಷ್ಟು ಮಂದಿ ಚೇತರಿಸಿಕೊಂಡಿದ್ದಾಗಿ ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.