ನವದೆಹಲಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಮುಂದಿನ 45 ದಿನಗಳಲ್ಲಿ ಚಿಲ್ಲರೆ ದಿನಸಿ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ದೇಶದಾದ್ಯಂತ 20 ಲಕ್ಷ ‘ಸುರಕ್ಷಾ’ ಅಂಗಡಿಗಳನ್ನು ಸ್ಥಾಪಿಸಲು ಯೋಚಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕನ್ಸ್ಯೂಮರ್ ಅಫೇರ್ಸ್ ಸೆಕ್ರೆಟರಿ ಪವನ್ ಕುಮಾರ್, ಸಾರ್ವಜನಿಕ ಮತ್ತು ಖಾಸಗಿ ವಲಯದ ಎಫ್ಎಂಸಿಜೆ ಸದಸ್ಯರ ಜೊತೆಗೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ. ಸ್ಥಳೀಯ ಕಿರಾಣಿ ಅಂಗಡಿಗಳ ಸಹಕಾರದೊಂದಿಗೆ ‘ಸುರಕ್ಷಾ’ ಚಿಲ್ಲರೆ ಮಾರಾಟ ಆರಂಭಿಸಲಾಗುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸುರಕ್ಷಾ ಕ್ರಮಗಳನ್ನು ಅನುಸರಿಸುವ ಮೂಲಕ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ತಿಳಿಸಿದ್ದಾರೆ.
ಸುರಕ್ಷಾ ಅಂಗಡಿಯ ಜೊತೆಗೆ ಸುರಕ್ಷಾ ಸರ್ಕಲ್ಗಳನ್ನು ನಿರ್ಮಿಸಲಾಗುವುದು. ಆ ಮೂಲಕ ಸಾಮಾಜಿಕ ಅಂತರ ಮತ್ತು ಶುಚಿತ್ವ, ನೈರ್ಮಲ್ಯ ಮೊದಲಾದ ಕಾಳಜಿಯನ್ನು ತೆಗೆದುಕೊಳ್ಳಲಾಗುವುದು. ಇಂತಹ ಅಂಗಡಿಗಳಲ್ಲಿ ಆಹಾರ ವಸ್ತುಗಳನ್ನು, ಸಲೂನ್ಗಳು ಮತ್ತು ಬಟ್ಟೆಗಳ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಬಗ್ಗೆ ಈಗಾಗಲೇ 50 ಕ್ಕೂ ಅಧಿಕ ಎಫ್ಎಂಸಿಜೆ ಕಂಪೆನಿಗಳ ಜೊತೆಗೂ ಮಾತುಕತೆ ನಡೆಸಲಾಗಿರುವ ಬಗ್ಗೆ ಮಾಹಿತಿ ಇದ್ದು, ಸುರಕ್ಷಾ ಅಂಗಡಿಗಳ ಮೂಲಕ ಮುಂದಿನ ದಿನಗಳಲ್ಲಿ ಜನರ ಆಹಾರ ಅಗತ್ಯತೆಗಳನ್ನು ಪೂರೈಕೆ ಮಾಡುವಲ್ಲಿ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎನ್ನಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.