ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಭಾರತದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿರುವ ಅಂಬೇಡ್ಕರ್ ಅವರು, 1990ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾದವರು.
ಬಾಬಾಸಾಹೇಬ್ ಅಂಬೇಡ್ಕರ್ 1891ರ ಎಪ್ರಿಲ್ 14ರಂದು ಮಧ್ಯಪ್ರದೇಶದ ಮಾವ್ ಪ್ರದೇಶದಲ್ಲಿ ಜನಿಸಿದರು. ಇಂದು ಆ ಪ್ರದೇಶ ಡಾ. ಅಂಬೇಡ್ಕರ್ ನಗರ ಎಂದು ಪ್ರಸಿದ್ಧಿಯಾಗಿದೆ.
ಅಂಬೇಡ್ಕರ್ ಒಬ್ಬ ಖ್ಯಾತ ವಕೀಲರಾಗಿದ್ದರು, ಆರ್ಥಿಕ ತಜ್ಞರಾಗಿದ್ದರು, ಸಾಮಾಜಿಕ ಸುಧಾರಕರಾಗಿದ್ದರು, ರಾಜಕಾರಣಿಯಾಗಿದ್ದರು. ದುರ್ಬಲ ವರ್ಗದ ಉನ್ನತಿಗಾಗಿ ಮತ್ತು ಸಮಾಜದಲ್ಲಿನ ತಾರತಮ್ಯವನ್ನು ಹೋಗಲಾಡಿಸುವ ಸಲುವಾಗಿ ಇವರು ತಮ್ಮ ಜೀವನವನ್ನೇ ಮುಡುಪಾಗಿಟ್ಟರು.
ಅಂಬೇಡ್ಕರ್ ಜಯಂತಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಟ್ವೀಟ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.
“ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಜಯಂತಿಯಂದು ಸಮಸ್ತ ದೇಶವಾಸಿಗಳ ಪರವಾಗಿ ವಿನಮ್ರ ಶ್ರದ್ಧಾಂಜಲಿ” ಎಂದು ಮೋದಿ ಹೇಳಿದ್ದಾರೆ.
बाबासाहेब डॉ. भीमराव अम्बेडकर को उनकी जयंती पर सभी देशवासियों की ओर से विनम्र श्रद्धांजलि। #AmbedkarJayanti pic.twitter.com/ddDiD8HAe5
— Narendra Modi (@narendramodi) April 14, 2020
ಅಂಬೇಡ್ಕರ್ ಅವರು ದೇಶದ ಮೊದಲ ಕಾನೂನು ಸಚಿವ. ಸ್ವಾತಂತ್ರ್ಯದ ಬಳಿಕ ಭಾರತದ ಸಂವಿಧಾನ ರಚನೆಯಲ್ಲಿ ಅವರು ವಹಿಸಿದ್ದ ಪಾತ್ರ ಅಮೋಘ. ಸಮಾಜದಲ್ಲಿನ ತಾರತಮ್ಯವನ್ನು ಹೋಗಲಾಡಿಸುವ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತಿ ದೊಡ್ಡ ನಮನ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.