ಬೆಂಗಳೂರು: ಎಪ್ರಿಲ್ 20ರವರೆಗೆ ಬೆಂಗಳೂರು ನಗರದ ಎಲ್ಲಾ ಕಡೆಗಳಲ್ಲಿಯೂ ಭಾರತೀಯ ದಂಡ ಸಂಹಿತೆ 1973 ಅಡಿಯ ಸೆಕ್ಷನ್ 144 ಮುಂದುವರೆಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಸೆಕ್ಷನ್ 144 ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸುತ್ತದೆ.
“ಏಪ್ರಿಲ್ 14 ರ ಬೆಳಿಗ್ಗೆ ಹನ್ನೆರಡು ಗಂಟೆಗೆ ಆರಂಭಗೊಂಡ ಸೆಕ್ಷನ್ ಏಪ್ರಿಲ್ 20ರ ಬೆಳಗ್ಗೆ 12ರವರೆಗೆ ಮುಂದುವರೆಯಲಿದೆ. ಬೆಂಗಳೂರಿನ ಎಲ್ಲ ಪ್ರದೇಶಗಳಲ್ಲಿ ಇದು ಜಾರಿಯಲ್ಲಿರಲಿದೆ” ಎಂದು ರಾವ್ ಹೇಳಿದ್ದಾರೆ.
ಇದುವರೆಗೆ ಕರ್ನಾಟಕದಲ್ಲಿ 258 ಕರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 9000 ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ಎಲ್ಲ ಕಡೆಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆಡಳಿತ ಮುಂದಾಗಿದೆ. ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಏಪ್ರಿಲ್ 20ರ ವೇಳೆಗೆ ಸೋಂಕಿನ ಪ್ರಕರಣಗಳು ಇಳಿಮುಖವಾದರೆ ವಿನಾಯಿತಿಯನ್ನು ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದರು. ಹೀಗಾಗಿ ಬೆಂಗಳೂರಿನಲ್ಲಿ ಏಪ್ರಿಲ್ 20ರ ವರೆಗೆ ಸೆಕ್ಷನ್ ವಿಧಿಸಲಾಗಿದೆ. ಬಳಿಕ ಪರಿಸ್ಥಿತಿ ಹತೋಟಿಗೆ ಬಂದರೆ ತುಸು ಸಡಿಲಿಕೆ ಸಿಗುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.