ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರ ವರೆಗೆ ಲಾಕ್ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ರೈಲ್ವೆ ಇಲಾಖೆಯೂ ಮೇ 3 ರ ವರೆಗೆ ಎಲ್ಲಾ ಪ್ಯಾಸೆಂಜರ್ ಮತ್ತು ತುರ್ತು ರೈಲು ಸೇವೆಗಳನ್ನು ರದ್ದುಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಅಲ್ಲದೆ ಈ ಸಂದರ್ಭದಲ್ಲಿ ಯಾವುದೇ ವಿಶೇಷ ರೈಲು ಸೇವೆಗಳನ್ನೂ ಇಲಾಖೆ ನೀಡುವುದಿಲ್ಲವಾಗಿದ್ದು, ಜನರು ವದಂತಿಗಳನ್ನು ಹಬ್ಬದಂತೆ ಮತ್ತು ಕಿವಿಗೊಡದಂತೆ ತಿಳಿಸಿದೆ.
ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ರೈಲ್ವೆ ಇಲಾಖೆ, ಮೇ 3 ರ ವರೆಗೆ ಯಾವುದೇ ರೀತಿಯ ಪ್ಯಾಸೆಂಜರ್ ರೈಲು ವ್ಯವಸ್ಥೆ ಇಲ್ಲ. ಪ್ರಯಾಣಿಕರ ದಟ್ಟಣೆ ತಡೆಯಲು ಯಾವುದೇ ಸ್ಪೆಷಲ್ ರೈಲುಗಳ ಓಡಾಟವೂ ಇಲ್ಲ. ಈ ಬಗ್ಗೆ ಯಾವುದೇ ಸುಳ್ಳು ಸುದ್ದಿಗಳನ್ನು ನಂಬದಂತೆ ಮತ್ತು ವದಂತಿಗಳನ್ನು ತಡೆಯುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಗೆ ಸಹಕರಿಸುವಂತೆ ಜನರಲ್ಲಿ ವಿನಂತಿಸಿಕೊಂಡಿದೆ.
CLARIFICATION: A communication related to internal planning of SCR to assess demand for train services is being misinterpreted in some sections as decision to run spl trains for migrant labour
There is NO such proposal & ALL Passenger Trains stands CANCELLED till 03.05.2020
— SouthCentralRailway (@SCRailwayIndia) April 15, 2020
ಈ ವರೆಗೆ ನಡೆದಿರುವ ಬುಕ್ಕಿಂಗ್ಗಳನ್ನು ರದ್ದು ಮಾಡಲಾಗಿದ್ದು, ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಿದವರ ಹಣವನ್ನು ಖಾತೆಗೆ ಜಮೆ ಮಾಡಲಾಗುತ್ತದೆ. ಇನ್ನು ರೈಲ್ವೆ ನಿಲ್ದಾಣಗಳಲ್ಲಿ ಟಿಕೆಟ್ ಬುಕ್ ಮಾಡಿದವರಿಗೆ ಜುಲೈ 31 ರ ವರೆಗೆ ಹಣವನ್ನು ಹಿಂಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಮೇ 3 ರ ವರೆಗಿನ ಎಲ್ಲಾ ಬುಕಿಂಗ್ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
ಮೇ 3 ರ ಲಾಕ್ಡೌನ್ ನಂತರದಲ್ಲಿ ಪ್ರಧಾನಿ ಹೊರಡಿಸುವ ಆದೇಶದ ನಂತರವಷ್ಟೇ ಮುಂದಿನ ಕ್ರಮಗಳ ಬಗ್ಗೆ ಇಲಾಖೆ ತಿಳಿಸುವುದಾಗಿ ಹೇಳಿಕೆ ನೀಡಿದೆ. ಅಲ್ಲೀಯವರೆಗೆ ಇ-ಬುಕ್ಕಿಂಗ್ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದೆ. ಆ ಮೂಲಕ ಕೊರೋನಾ ಸೋಂಕಿನಿಂದ ದೇಶದ ಜನರನ್ನು ಕಾಪಾಡಲು ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಜೊತೆ ಕೈ ಜೋಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.