ನವದೆಹಲಿ: ಕೊರೋನಾವೈರಸ್ ಎಂಬ ಜಾಗತಿಕ ಮಹಾಮಾರಿ ಸಾಂಕ್ರಾಮಿಕ ರೋಗವನ್ನು ನಿರ್ಮೂಲನೆ ಮಾಡಲು 2022 ರ ವರೆಗೆ ಸಾಮಾಜಿಕ ಅಂತರ ಅತ್ಯಗತ್ಯವಾಗುತ್ತದೆ ಎಂದು ನೂತನ ಅಧ್ಯಯನವೊಂದು ಹೇಳಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯಲು ಮತ್ತು ಹೊಸ ಸೋಂಕು ಕಾಣಿಸಿಕೊಳ್ಳದಂತೆ ತಡೆಯಲು 2022ರ ವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯವಾಗುತ್ತದೆ ಹೊಸ ಹಾರ್ವರ್ಡ್ ಅಧ್ಯಯನ ಹೇಳಿದೆ.
ಸಂಶೋಧಕರ ಪ್ರಕಾರ, ಸೋಂಕು ಕಡಿಮೆಯಾದ ಕೂಡಲೇ ಏಕಾಏಕಿ ಸಾಮಾಜಿಕ ಅಂತರದ ಕ್ರಮಗಳನ್ನು ಕೈಬಿಟ್ಟರೆ, ಎರಡನೇ ಹಂತದ ಸೋಂಕು ಹೊರಹೊಮ್ಮುವ ಸಾಧ್ಯತೆ ಇದೆ. ಎರಡನೇ ಹಂತ ಅತ್ಯಂತ ಭೀಕರ ವಾಗಿರಬಹುದು ಎಂದು ಸಂಶೋಧಕರು ಹೇಳಿದ್ದಾರೆ.
ಮಂಗಳವಾರ ವಿಜ್ಞಾನ ನಿಯತಕಾಲಿಕೆಯಲ್ಲಿ ಅಧ್ಯಯನವನ್ನು ಪ್ರಕಟಿಸಲಾಗಿದೆ.
ಮಾತ್ರವಲ್ಲದೆ, ಪ್ರಸ್ತುತ ಅನುಷ್ಠಾನದಲ್ಲಿರುವ ಸಾಮಾಜಿಕ ಅಂತರವೊಂದೇ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಾಕಾಗುವುದಿಲ್ಲ ಎಂದು ಈ ಸಂಶೋಧಕರು ಅಭಿಪ್ರಾಯಿಸಿದ್ದಾರೆ.
ಈ ಮೂಲಕ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಹೆಚ್ಚಿನ ಕಠಿಣ ಕ್ರಮಗಳ ಅಗತ್ಯವಿದೆ ಎಂಬುದನ್ನು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.