ನವದೆಹಲಿ: ಕೊರೋನಾ ಸೋಂಕಿನ ಭೀತಿಯ ನಡುವೆಯೂ ಕೇಂದ್ರ ಸರ್ಕಾರದ ವತಿಯಿಂದ ಪ್ರಸಕ್ತ ವರ್ಷದ ಗೋಧಿ ಖರೀದಿ ಇಂದಿನಿಂದ ಆರಂಭವಾಗಿದೆ.
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಆರೋಗ್ಯ ಕ್ಕೆ ಪೂರಕ, ಸೋಂಕು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಈ ಬಾರಿ ಗೋಧಿ ಖರೀದಿ ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ಸರ್ಕಾರವೂ ಅನೇಕ ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಗಮನದಲ್ಲಿಟ್ಟುಕೊಂಡು ಈ ಪ್ರಕ್ರಿಯೆ ನಡೆಸಲಾಗಿದೆ.
ಅಕಾಲಿಕ ಮಳೆ, ಆಲಿಕಲ್ಲು ಮಳೆ ಮೊದಲಾದ ಪ್ರಕೃತಿ ವಿಕೋಪಗಳ ನಡುವೆಯೂ ಈ ಬಾರಿಯ ಬೆಳೆ ರೈತನ ಕೈ ಹಿಡಿದಿದೆ. ರೈತ ಬೆಳೆದ ಕೃಷಿ ಉತ್ಪನ್ನಗಳ ಖರೀದಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಬೆಂಬಲವೂ ಅತ್ಯಗತ್ಯವಾಗಿದ್ದು, ಅದಕ್ಕನುಗುಣವಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಖರೀದಿಯಲ್ಲಿ ತೊಡಗಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಕಸ್ಟಮರ್ ಅಫೇರ್ಸ್ ಮಿನಿಸ್ಟರ್ ರಾಮ್ ವಿಲಾಸ್ ಪಸ್ವಾನ್, 2020-21 ನೇ ಸಾಲಿನಲ್ಲಿ ಸರಕುಗಳನ್ನು ದಾಸ್ತಾನು ಮಾಡಲು ಎಲ್ಲಾ ರಾಜ್ಯ ಸರ್ಕಾರಗಳೂ ಸರಿಯಾದ ಗೋದಾಮು ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ. ಜೊತೆಗೆ ಗೋದಾಮು ನಿರ್ವಹಣೆಗೆ ಬೇಕಾದ ಕಾರ್ಮಿಕರನ್ನು ಹೊಂದಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.
ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಗೋದಾಮುಗಳಲ್ಲಿ ಕಾರ್ಯ ನಿರ್ವಹಿಸಲು ಸರ್ಕಾರ ಸೂಚನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯ ಸರ್ಕಾರಗಳ ಜೊತೆಗೂ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿಗಳೊಂದಿಗಿನ ಚರ್ಚೆಯಲ್ಲಿ ಈ ವಿಚಾರದ ಬಗ್ಗೆಯೂ ಗಮನ ಹರಿಸಿದ್ದಾರೆ. ಜೊತೆಗೆ ಎಲ್ಲಾ ರಾಜ್ಯಗಳಲ್ಲೂ ಆಹಾರ ವಸ್ತುಗಳ ಸಂಗ್ರಹಣೆಗೆ ತೆಗೆದುಕೊಂಡ ಕ್ರಮಗಳ ಕುರಿತಾಗಿಯೂ ಪ್ರಧಾನಿ ಮಾಹಿತಿ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.