ಮೊರಾದಬಾದ್: ಆಂಬುಲೆನ್ಸ್ನಲ್ಲಿ ತೆರಳುತ್ತಿದ್ದ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದ 17 ಮಂದಿಯನ್ನು ಮೊರಾದಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಮಹಿಳೆಯರೂ ಸೇರಿದ್ದಾರೆ.
ನವಾಬ್ಪುರ ಪ್ರದೇಶದಲ್ಲಿ ಆಂಬುಲೆನ್ಸ್ ಮೇಲೆ ದಾಳಿ ನಡೆಸಿದ ಘಟನೆ ನಡೆದಿತ್ತು.
ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಅಮಿತ್ ಕುಮಾರ್ ಆನಂದ್ ಅವರ ಪ್ರಕಾರ, ಈಗಾಗಲೇ ಆರೋಪಿಗಳ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ನಾಗ್ಪನಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣದಲ್ಲಿ ಭಾಗಿಯಾದ ಇತರರನ್ನು ಪತ್ತೆ ಹಚ್ಚುವ ಸಲುವಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾವೈರಸ್ ಸೋಂಕಿತ ವ್ಯಕ್ತಿಯನ್ನು ಐಸೋಲೇಷನ್ಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಇದನ್ನು ತಡೆಗಟ್ಟುವ ಸಲುವಾಗಿ ಅಂಬುಲೆನ್ಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಇದರಿಂದಾಗಿ ನಾಲ್ಕು ಮಂದಿಗೆ ಗಾಯಗಳಾಗಿತ್ತು. ನನ್ನ ಮದ್ದೂರಿಗೆ ಮತ್ತು 3 ಅರೆವೈದ್ಯಕೀಯ ಸಿಬ್ಬಂದಿ ಗಾಯಗಳಾಗಿವೆ. ಒಂದು ಪೊಲೀಸ್ ವಾಹನ ಕೂಡ ಜಖಂಗೊಂಡಿದೆ.
ಈ ಘಟನೆಯ ಹಿಂದಿರುವವರು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಗಂಭೀರ ಪ್ರಕರಣವನ್ನು ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಚ್ಚರಿಕೆ ನೀಡಿದ್ದರು. ಅಲ್ಲದೆ ಘಟನೆಯಿಂದ ಉಂಟಾದ ನಷ್ಟವನ್ನು ಆರೋಪಿಗಳಿಂದಲೇ ಭರಿಸುವುದಾಗಿ ಹೇಳಿದ್ದಾರೆ.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೊರಾದಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಕೇಶ್ ಕುಮಾರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.