ನವದೆಹಲಿ: ಜಾರಿ ನಿರ್ದೇಶನಾಲಯವು ತಬ್ಲಿಘಿ ಜಮಾತ್ ನಾಯಕ ಮೌಲಾನ ಸಾದ್ ಖಂಢಲ್ವಿ ಮತ್ತು ಜಮಾತ್ ಸಂಘಟನೆಗೆ ಸಂಬಂಧಿಸಿದ ಇತರ ಟ್ರಸ್ಟ್ಗಳ ವಿರುದ್ಧ ಹಣಕಾಸು ವಂಚನೆ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ.
ಜಾರಿ ಪ್ರಕರಣ ಮಾಹಿತಿ ವರದಿ (ECIR) ಅನ್ನು ದೆಹಲಿ ಪೊಲೀಸರ ಎಫ್ಐಆರ್ ಆಧಾರಿತವಾಗಿ ಇಡಿ ದಾಖಲಿಸಿದೆ.
ಹಣಕಾಸು ವಂಚನೆ ತಡೆ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 31ರಂದು ದೆಹಲಿ ಪೊಲೀಸರ ಕ್ರೈಂಬ್ರಾಂಚ್ ವಿಭಾಗವು ಮೌಲ್ವಿ ಸೇರಿದಂತೆ ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲು ಮಾಡಿತ್ತು. ಕರೋನವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ವಿಧಿಸಲಾಗಿದ್ದ ನಿರ್ಬಂಧಗಳ ನಡುವೆಯೇ ಅಪಾರ ಪ್ರಮಾಣದ ಜನರನ್ನು ಸೇರಿಸಿ ತಬ್ಲಿಘಿ ಸಮಾವೇಶವನ್ನು ನಡೆಸಿದ ಹಿನ್ನೆಲೆಯಲ್ಲಿ ನಿಜಮುದ್ದಿನ್ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದೀಗ ಜಾರಿ ನಿರ್ದೇಶನಾಲಯವು ತಬ್ಲಿಘಿ ಜಮಾತ್ ಹಣಕಾಸು ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದೆ. ತಬ್ಲಿಘಿ ಜಮಾತ್ ಹಲವಾರು ಹಣಕಾಸು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.