ನವದೆಹಲಿ : ಕಳೆದ ಹಣಕಾಸು ವರ್ಷದ ಬಾಕಿ ಉಳಿದಿರುವ ಮೊತ್ತಗಳನ್ನು ಪಾವತಿಸಲು ಮತ್ತು 2020-21ರ ಮೊದಲ ಹದಿನೈದು ದಿನಗಳ ವೇತನ ಬಾಕಿಗಳನ್ನು ಪಾವತಿಸಲು ಕೇಂದ್ರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ಆರ್ಇಜಿಎಸ್) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 7,300 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನಿನ್ನೆ ಗ್ರಾಮೀಣಾಭಿವೃದ್ಧಿಯ ಎಲ್ಲಾ ಪ್ರಮುಖ ಯೋಜನೆಗಳ ಬಗ್ಗೆ ವಿವರವಾದ ಪರಿಶೀಲನೆ ನಡೆಸಿದರು.
MGNREGS ಕಾರ್ಯಗಳು ಸಾಮಾಜಿಕ ಅಂತರದ ಬಗ್ಗೆ ಸಾಕಷ್ಟು ಗಮನಹರಿಸಿಕೊಂಡು ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಕಾರ್ಯಾರಂಭವಾಗಬೇಕು ಎಂಬ ಆಶಯವನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ನೀರಾವರಿ ಮತ್ತು ನೀರಿನ ಸಂರಕ್ಷಣೆಗೆ ಸಂಬಂಧಿಸಿದ ಬಾಳಿಕೆ ಬರುವ ಆಸ್ತಿಗಳನ್ನು ರಚಿಸುವತ್ತ ಗಮನ ಹರಿಸಬೇಕು ಎಂದು ಸಚಿವರು ಹೇಳಿದರು.
93 ಸಾವಿರಕ್ಕೂ ಹೆಚ್ಚು ಸ್ವಸಹಾಯ ಗುಂಪು ಸದಸ್ಯರು ಹತ್ತಿಯ ರಕ್ಷಣಾತ್ಮಕ ಮುಖಗವಸುಗಳ ತಯಾರಿಕೆಯಲ್ಲಿ ಮತ್ತು ಸ್ಯಾನಿಟೈಜರ್ ತಯಾರಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ದೇಶಾದ್ಯಂತ ಕಮ್ಯೂನಿಟಿ ಕಿಚನ್ಗಳನ್ನು ನಡೆಸಲಾಗುತ್ತಿದೆ ಎಂದು ತೋಮರ್ ತೃಪ್ತಿ ವ್ಯಕ್ತಪಡಿಸಿದರು.
ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 800 ಕೋಟಿ ರೂಪಾಯಿಗಳನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತೋಮರ್ ಹೇಳಿದರು. ಎರಡನೇ ಮತ್ತು ಮೂರನೇ ಕಂತಿನ ಹಣವನ್ನು ಪಡೆದ ಈ ಯೋಜನೆಯ ಸುಮಾರು 40 ಲಕ್ಷ ಫಲಾನುಭವಿಗಳಿಗೆ ತಮ್ಮ ವಸತಿ ಘಟಕಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಪೂರ್ವಭಾವಿಯಾಗಿ ಸಹಾಯ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.