ನವದೆಹಲಿ: ದೇಶದಲ್ಲಿ ಕೊರೋನಾವೈರಸ್ನಿಂದ ಬಳಲುತ್ತಿರುವವರ ಸಂಖ್ಯೆ 13,387 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 1000 ದಷ್ಟು ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಈ ವರೆಗೆ 437 ಜನರನ್ನು ಈ ಮಹಾಮಾರಿ ಬಲಿ ಪಡೆದಿರುವ ಬಗ್ಗೆಯೂ ಸರಕಾರದ ಅಂಕಿ ಅಂಶಗಳು ಮಾಹಿತಿ ನೀಡುತ್ತಿದೆ.
ಈ ವರೆಗೆ ಈ ರೋಗದಿಂದ ಮುಕ್ತರಾದವರ ಸಂಖ್ಯೆ ಶುಕ್ರವಾರ: 13. 06%, ಗುರುವಾರ: 12.02% , ಬುಧವಾರ: 11. 41% ರಷ್ಟಿದ್ದರೆ, ಕಳೆದ 24 ಗಂಟೆಯಲ್ಲಿ 260 ರಷ್ಟು ರೋಗಿಗಳು ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ. ನಿನ್ನೆ ಸುಮಾರು 183 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿರುವ ಬಗ್ಗೆಯೂ ಅಂಕಿ ಅಂಶಗಳು ತಿಳಿಸಿವೆ.
ಕೊರೋನಾ ಬಗ್ಗೆ ಗೃಹ ಸಚಿವಾಲಯದ ಮಾಹಿತಿಗಳು
* ಮೇ ಮೊದಲ ವಾರದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಲಿದ್ದು, ಅನಂತರದಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದು ಈ ಹಿಂದೆ ಗೃಹ ಸಚಿವಾಲಯ ಮಾಹಿತಿ ನೀಡಿತ್ತು.
* ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಈ ಸಂದರ್ಭದಲ್ಲಿ ಸೋಂಕಿನ ಲಕ್ಷಣ ಹೊಂದಿರುವ ಎಲ್ಲರನ್ನೂ ಕೂಲಂಕುಷವಾಗಿ ಪರೀಕ್ಷಿಸುವ ಬಗ್ಗೆ ಗೃಹ ಸಚಿವಾಲಯ ಮಾಹಿತಿ ನೀಡಿದೆ.
* ಕೊರೋನಾ ಸೋಂಕು ಹೆಚ್ಚಾಗಿ ರೆಡ್ ಝೋನ್ ಎಂದು ಗುರುತಿಸಲ್ಪಟ್ಟ ಪ್ರದೇಶಗಳಲ್ಲಿ ಕಠಿಣ ಲಾಕ್ಡೌನ್ ಕ್ರಮಗಳನ್ನು ಅನುಸರಿಸಲಾಗುವುದಾಗಿಯೂ ತಿಳಿಸಿದೆ.
* ಹಣಕಾಸು ವ್ಯವಹಾರಗಳ ಮೂಲಕ ಆರ್ಥಿಕತೆಯ ಮೇಲೆ ಪ್ರಭಾವ ಬೀರುವ ಕ್ಷೇತ್ರಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡುವುದಾಗಿ ತಿಳಿಸಿತ್ತು
* ಕೃಷಿ, ಗ್ರಾಮೀಣ ಕೈಗಾರಿಕೆ, ರಸ್ತೆ ಕೆಲಸಗಳು ಮೊದಲಾದವುಗಳನ್ನು ನಿಯಂತ್ರಣ ಕ್ರಮಗಳನ್ನು ಅನುಸರಿಸುವ ಮೂಲಕ ಮತ್ತೆ ಆರಂಭಿಸಲು ಅನುಮತಿ ನೀಡಿದೆ.
* ಸೋಂಕು ನಿಯಂತ್ರಣದಲ್ಲಿರುವ ಪ್ರದೇಶಗಳಿಗೆ ನಿಧಾನವಾಗಿ ಸೋಂಕು ವ್ಯಾಪಿಸದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡು ಲಾಕ್ಡೌನ್ ಸಡಿಲಗೊಳಿಸಲು ಅವಕಾಶ ನೀಡಿದೆ.
* ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಗುಜರಾತ್ ಗೆ ಹೋಲಿಸಿದರೆ ಪಂಜಾಬ್, ರಾಜಸ್ಥಾನ, ಬಿಹಾರದಲ್ಲಿ ಸೋಂಕು ನಿಯಂತ್ರಣ ಮಾಡುವಲ್ಲಿ ಹೆಚ್ಚು ಯಶಸ್ವಿಯಾಗಿರುವುದಾಗಿಯೂ ಸಚಿವಾಲಯ ಮಾಹಿತಿ ನೀಡಿದೆ.
ರಾಜಸ್ಥಾನದಲ್ಲಿ 1,131 ಸೋಂಕಿತರಲ್ಲಿ 164 ಮಂದಿ ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಮತ್ತು ಬುಧವಾರ 424 ಸೋಂಕಿತರು ದಾಖಲಾಗಿದ್ದಾರೆ. ಆದರೆ ದೇಶದಲ್ಲಿ 15,327 ರಿಂದ 14,504 ಕ್ಕೆ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಆದರೆ ಆಂಧ್ರ ಮತ್ತು ಮಧ್ಯಪ್ರದೇಶದಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಆತಂಕ ಸೃಷ್ಟಿಯಾಗಿದೆ.
ಕಳೆದ 24 ಗಂಟೆಗಳಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದು ಇದರಲ್ಲಿ ಎರಡು ಪ್ರಕರಣ ಬಿಹಾರಕ್ಕೆ ಸಂಬಂಧಿಸಿದ್ದಾಗಿದೆ. ಅದಲ್ಲದೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದ್ದು ಇಂತಹ ಪರಿಸ್ಥಿತಿಗಳಿಂದ ಕೊರೋನಾ ನಿಯಂತ್ರಣ ವಿಚಾರದಲ್ಲಿ ಕೊಂಚ ಮಟ್ಟಿನ ಹಿನ್ನಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.